ಲಾವತ್ತಡ್ಕ : ಹಿಟಾಚಿ ಹೊತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್, ಓರ್ವ ಮೃತ್ಯು, 8 ಮಂದಿಗೆ ಗಾಯ - Karavali Times ಲಾವತ್ತಡ್ಕ : ಹಿಟಾಚಿ ಹೊತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್, ಓರ್ವ ಮೃತ್ಯು, 8 ಮಂದಿಗೆ ಗಾಯ - Karavali Times

728x90

16 June 2025

ಲಾವತ್ತಡ್ಕ : ಹಿಟಾಚಿ ಹೊತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್, ಓರ್ವ ಮೃತ್ಯು, 8 ಮಂದಿಗೆ ಗಾಯ

 ಉಪ್ಪಿನಂಗಡಿ, ಜೂನ್ 16, 2025 (ಕರಾವಳಿ ಟೈಮ್ಸ್) : ಹಿಟಾಚಿ ಲೋಡ್ ಮಾಡಿಕೊಂಡು ಹೋಗುತ್ತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಸ್ ಪ್ರಯಾಣಿಕ ಮೃತಪಟ್ಟಿದ್ದು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ-75 ರ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕ ಎಂಬಲ್ಲಿ ಭಾನುವಾರ ರಾತ್ರಿ ವೇಳೆ ಸಂಭವಿಸಿದೆ. 

ಮೃತ ಬಸ್ ಪ್ರಯಾಣಿಕರನ್ನು ಕಾರ್ಕಳ ನಿವಾಸಿ ಶಂಕರ ನಾರಾಯಣ ಎಂದು ಹೆಸರಿಸಲಾಗಿದೆ. ಭಾನುವಾರ ರಾತ್ರಿ ಸುಮಾರು 11.30 ರ ವೇಳೆಗೆ ಲಾವತ್ತಡ್ಕ ಎಂಬಲ್ಲಿ ಹಿಟಾಚಿಯನ್ನು ಲೋಡ್ ಮಾಡಿಕೊಂಡು ಸಾಗುತ್ತಿದ್ದ ಲಾರಿಗೆ ಕಾರ್ಕಳ-ದರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ ಸುಗಮ ಹೆಸರಿನ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ಬಸ್ಸಿನಲ್ಲಿದ್ದ ಕಾರ್ಕಳ ನಿವಾಸಿ ಶಂಕರ ನಾರಾಯಣ ಎಂಬವರು ಮೃತಪಟ್ಟಿದ್ದು, ಮೃತದೇಹವು ಮಂಗಳೂರು ಎ ಜೆ ಆಸ್ಪತ್ರೆಯಲ್ಲಿದೆ. ಬಸ್ಸಿನಲ್ಲಿದ್ದ ಇತರ 8ಕ್ಕೂ ಹೆಚ್ಚು ಜನರಿಗೆ ಗಾಯಳಾಗಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 



  • Blogger Comments
  • Facebook Comments

0 comments:

Post a Comment

Item Reviewed: ಲಾವತ್ತಡ್ಕ : ಹಿಟಾಚಿ ಹೊತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಖಾಸಗಿ ಬಸ್, ಓರ್ವ ಮೃತ್ಯು, 8 ಮಂದಿಗೆ ಗಾಯ Rating: 5 Reviewed By: karavali Times
Scroll to Top