ಬಂಟ್ವಾಳ, ಜೂನ್ 18, 2025 (ಕರಾವಳಿ ಟೈಮ್ಸ್) : ಯಾವುದೇ ಸೂಚನೆ ನೀಡದೆ ಹಿಮ್ಮುಖವಾಗಿ ಚಲಿಸಿದ ಈಚರ್ ಲಾರಿಯಲ್ಲಿದ್ದ ಸಿಮೆಂಟ್ ಕಂಬ ಹೊರ ಬಂದು ಹಿಂದಿನಿಂದ ಸಂಚರಿಸುತ್ತಿದ್ದ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಜಖಂಗೊಂಡ ಘಟನೆ ಬಿ ಕಸಬಾ ಗ್ರಾಮದ ಅಜೆಕಲ ಕ್ರಾಸ್ ಎಂಬಲ್ಲಿ ಜೂನ್ 16 ರಂದು ಸಂಜೆ ಸಂಭವಿಸಿದೆ.
ಸಂಗಬೆಟ್ಟು ಗ್ರಾಮದ ನಿವಾಸಿ ಹಸನ್ ಎ ಕೆ (63) ಎಂಬವರು ತನ್ನ ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಜೆಕಲ ಕ್ರಾಸ್ ಎಂಬಲ್ಲಿಗೆ ತಲುಪಿದಾಗ ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಈಚರ್ ಟ್ರಕ್ಕನ್ನು ಯಾವುದೇ ಸೂಚನೆ ನೀಡದೆ ಒಮ್ಮೆಲೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಟ್ರಕ್ಕಿನಲ್ಲಿದ್ದ ಸಿಮೆಂಟ್ ಕಂಬ ಹೊರಕ್ಕೆ ಬಂದು ಕಾರಿನ ಹಿಂಭಾಗದ ಬಲಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕಾಂಕ್ರಿಟ್ ರಸ್ತೆಗೆ ಮಗುಚಿ ಬಿದ್ದು ಜಖಂಗೊಂಡಿದೆ. ಪ್ರಯಾಣಿಕರಿಗೆ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment