ಬಂಟ್ವಾಳ, ಜೂನ್ 02, 2025 (ಕರಾವಳಿ ಟೈಮ್ಸ್) : ಆರೆಸ್ಸೆಸ್ ಪ್ರಮುಖ ಡಾ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ ಅನೇಕ ಹಿಂದೂ ನಾಯಕರುಗಳನ್ನು ಗುರಿಯಾಗಿಸಿಕೊಂಡು ಉದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸುವ ಮೂಲಕ ಕಿರುಕುಳ ನೀಡುವುದಲ್ಲದೆ, ಜಿಲ್ಲೆಯಲ್ಲಿ ಅಶಾಂತಿ ತಲೆದೋರುವಂತೆ ಮಾಡುವ ರಾಜ್ಯ ಸರಕಾರದ ನೀತಿ ಖಂಡನೀಯ ಎಂದು ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಹೇಳಿದ್ದಾರೆ.
ಇತ್ತೀಚಿಗೆ ಕೊಲೆಯಾದ ಸುಹಾಶ್ ಶೆಟ್ಟಿ ಅವರ ಶೃದ್ದಾಂಜಲಿ ಸಭೆಯಲ್ಲಿ ಮಾಡಿದ ಭಾಷಣದಿಂದ ಮತೀಯ ಗುಂಪುಗಳ ನಡುವೆ ವೈಮನಸ್ಸು ಮಾಡುವಂತೆ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪ ಮಾಡಿ ಪ್ರಕರಣ ದಾಖಲಿಸಿರುವುದು ನೋಡಿದರೆ ಜಿಲ್ಲೆಯಲ್ಲಿ ಕೋಮು ದ್ವೇಷವನ್ನು ರಾಜ್ಯ ಸರಕಾರ ಪೆÇೀಲೀಸ್ ಇಲಾಖೆಯ ಮುಖಾಂತರ ಮಾಡುತ್ತಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದವರು ಆರೋಪ ಮಾಡಿದ್ದಾರೆ.
ದ್ವೇಷ ಭಾಷಣದ ವಿಚಾರದಲ್ಲಿ ಕೇವಲ ಹಿಂದೂ ನಾಯಕರುಗಳನ್ನು ಗುರಿಯಾಗಿಸಿ ಪ್ರಕರಣ ದಾಖಲಿಸುವ ಸರಕಾರದ ಕ್ರಮ ಸರಿಯಾ ಎಂದು ಪ್ರಶ್ನಿಸಿದ ಶಾಸಕ ನಾಯಕ್ ಕಳೆದ ಏಳು ವರ್ಷಗಳಿಂದ ಶಾಂತವಾಗಿದ್ದ ತಾಲೂಕಿನಲ್ಲಿ ಮತ್ತೆ ಕೋಮು ದ್ವೇಷದ ವಿಷ ಬೀಜ ಬಿತ್ತಿದವರು ಯಾರು? ಹಿಂಸೆಗೆ ಪ್ರೇರಣೆ ನೀಡಿದವರು ಯಾರು? ಸೋಷಿಯಲ್ ಮೀಡಿಯಾದಲ್ಲಿ ಪೆÇೀಸ್ಟ್ ಗಳನ್ನು ಹಾಕಿದವರು ಯಾರು? ಇಂತಹವರ ಮೇಲೆ ಕಾನೂನು ಕ್ರಮಕೈಗೊಳ್ಳದಿರುವ ಇಲಾಖೆಯ ನಡೆ ಏನು? ಎಂದು ಪ್ರಶ್ನಿಸಿದ್ದಾರೆ.
ಕೇವಲ ಹಿಂದೂ ನಾಯಕರುಗಳನ್ನು ಗುರುತಿಸಿ, ಟಾರ್ಗೆಟ್ ಮಾಡಿ ಕಾನೂನು ಸುವ್ಯವಸ್ಥೆ ಕಾಪಾಡುವ ನೆಪದಲ್ಲಿ ಅನ್ಯಾಯ ಮಾಡಲಾಗುತ್ತಿರುವ ಕ್ರಮ ನ್ಯಾಯಸಮ್ಮತವಾದುದಲ್ಲ. ನೈಜ ಆರೋಪಿಗಳಿಗೆ ಕಾನೂನು ಪ್ರಕಾರ ಶಿಕ್ಷೆ ನೀಡಿ,ಆದರೆ ಇದರ ನೆಪದಲ್ಲಿ ಹಿರಿಯರಿಗೆ, ಹಿಂದೂ ಮುಖಂಡರುಗಳಿಗೆ ಸುಖಾಸುಮ್ಮನೆ ಕಿರುಕುಳ ನೀಡುವುದು ಸರಿಯಲ್ಲ ಎಂದಿರುವ ರಾಜೇಶ್ ನಾಯಕ್ ಕಾಂಗ್ರೆಸ್ ಸರ್ಕಾರ ಹಿಂದೂಗಳ ಧ್ವನಿ ಅಡಗಿಸಲು ಷಡ್ಯಂತ್ರ ನಡೆಸಿದ್ದು ಗೊಂದಲಕ್ಕೆ ಕಾರಣವಾಗಬಹುದು. ರಾಜ್ಯ ಸರಕಾರ ಪೆÇೀಲೀಸ್ ಇಲಾಖೆಯ ಮೂಲಕ ಸುಳ್ಳು ಕೇಸುಗಳನ್ನು ಹಾಕಿ ಹಿಂದೂ ನಾಯಕರುಗಳನ್ನು ಕಟ್ಟಿಹಾಕುವ ಪ್ರಯತ್ನ ಮಾಡುವ ಕನಸು ಕಂಡರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.
ಮತ ಬ್ಯಾಂಕ್ ಗಾಗಿ ರಾಜಕೀಯ ಮಾಡುವುದು ಬಿಟ್ಟು ಜಿಲ್ಲೆಯ ಶಾಂತಿಗಾಗಿ ರಾಜಕೀಯ ನಾಯಕರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಯುತ ವಿಚಾರಣೆ ಮಾಡಲಿ ಎಂದು ಶಾಸಕರು ರಾಜ್ಯ ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.
0 comments:
Post a Comment