ಮಂಗಳೂರು, ಜೂನ್ 29, 2025 (ಕರಾವಳಿ ಟೈಮ್ಸ್) : ಉರ್ವಾ ಪೆÇಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ ನೆಲ ಮಾಳಿಗೆಯಲ್ಲಿ ಸುಮಾರು 35 ರಿಂದ 40 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ.
ಶುಕ್ರವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಕಟ್ಟಡದಲ್ಲಿನ ನೀರು ಸರಬರಾಜು ಸಮಸ್ಯೆಯನ್ನು ಪರಿಶೀಲಿಸಲು ಹೋಗಿದ್ದ ಕೆಲಸಗಾರನೊಬ್ಬ ಶವವನ್ನು ಪತ್ತೆ ಹಚ್ಚಿದ್ದಾನೆ. ನೆಲ ಮಾಳಿಗೆ ಭಾಗಶಃ ನೀರಿನಿಂದ ತುಂಬಿತ್ತು. ಮೃತ ದೇಹವು ಸುಮಾರು ಮೂರು ಅಡಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದ್ದು, ಕೊಳೆಯುವಿಕೆಯ ಲಕ್ಷಣಗಳು ಕಂಡು ಬಂದಿವೆ.
ಪೆÇಲೀಸರು, ಅಪರಾಧ ವಿಭಾಗದ ಅಧಿಕಾರಿಗಳು ಮತ್ತು ವಿಧಿವಿಜ್ಞಾನ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ದಾಖಲಾದ ವರದಿಯ ಆಧಾರದ ಮೇಲೆ, ಉರ್ವಾ ಪೆÇಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2025 ರಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್), 2023 ರ ಸೆಕ್ಷನ್ 103(1) ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಮೃತರ ಗುರುತು ಪತ್ತೆ, ಸಾವಿಗೆ ಕಾರಣ ಮತ್ತು ಸಂದರ್ಭಗಳನ್ನು ಕಂಡು ಹಿಡಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment