ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ : ನೂತನ ಡೀಸಿಯಾಗಿ ದರ್ಶನ್ ಎಚ್.ವಿ. ನೇಮಕ - Karavali Times ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ : ನೂತನ ಡೀಸಿಯಾಗಿ ದರ್ಶನ್ ಎಚ್.ವಿ. ನೇಮಕ - Karavali Times

728x90

17 June 2025

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ : ನೂತನ ಡೀಸಿಯಾಗಿ ದರ್ಶನ್ ಎಚ್.ವಿ. ನೇಮಕ

 ಮಂಗಳೂರು, ಜೂನ್ 17, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈ ಮುಹಿಲನ್ ಎಂ ಪಿ ಅವರನ್ನು ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರನ್ನು ನೇಮಕಗೊಳಿಸಿ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. 

ರಾಜ್ಯದ 16 ಐ ಎ ಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ ಪಿ ಅವರನ್ನು ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಶನ್ ಆಂಡ್ ಕಮಿಷನರ್ ಆಫ್ ಸ್ಟಾಂಪ್ಸ್, ಬೆಂಗಳೂರು ಈ ಹುದ್ದೆಗೆ ವರ್ಗಾವಣೆಗೊಳಿಸಿದೆ. ಬೆಂಗಳೂರು ಕಮರ್ಷಿಯಲ್ ಟ್ಯಾಕ್ಸ್ ಅಡಿಶನಲ್ ಕಮಿಷನರ್ ಆಗಿದ್ದ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರಕಾರ ಆದೇಶಿಸಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ವರ್ಗಾವಣೆ : ನೂತನ ಡೀಸಿಯಾಗಿ ದರ್ಶನ್ ಎಚ್.ವಿ. ನೇಮಕ Rating: 5 Reviewed By: karavali Times
Scroll to Top