ತುರ್ತು ಸಂಧರ್ಭ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ, ಒಂದೇ ತುರ್ತು ಕರೆ-112” ಸಹಾಯವಾಣಿ ಆರಂಭ : ಮಂಗಳೂರಿನಲ್ಲಿ ತುರ್ತು ಸ್ಪಂದನೆ ಕರ್ತವ್ಯಕ್ಕೆ 28 ಪೆಟ್ರೋಲಿಂಗ್ ವಾಹನಗಳು - Karavali Times ತುರ್ತು ಸಂಧರ್ಭ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ, ಒಂದೇ ತುರ್ತು ಕರೆ-112” ಸಹಾಯವಾಣಿ ಆರಂಭ : ಮಂಗಳೂರಿನಲ್ಲಿ ತುರ್ತು ಸ್ಪಂದನೆ ಕರ್ತವ್ಯಕ್ಕೆ 28 ಪೆಟ್ರೋಲಿಂಗ್ ವಾಹನಗಳು - Karavali Times

728x90

10 June 2025

ತುರ್ತು ಸಂಧರ್ಭ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ, ಒಂದೇ ತುರ್ತು ಕರೆ-112” ಸಹಾಯವಾಣಿ ಆರಂಭ : ಮಂಗಳೂರಿನಲ್ಲಿ ತುರ್ತು ಸ್ಪಂದನೆ ಕರ್ತವ್ಯಕ್ಕೆ 28 ಪೆಟ್ರೋಲಿಂಗ್ ವಾಹನಗಳು

ಮಂಗಳೂರು, ಜೂನ್ 10, 2025 (ಕರಾವಳಿ ಟೈಮ್ಸ್) : ತುರ್ತು ಸಂಧರ್ಭಗಳಲ್ಲಿ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಕರ್ನಾಟಕ ರಾಜ್ಯ ಸರಕಾರವು ಸಾರ್ವಜನಿಕರಿಗೆ ತುರ್ತು ಸಂಧರ್ಭದಲ್ಲಿ ಅಗತ್ಯ ತುರ್ತು ಸ್ಪಂದನೆ ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಅದುವೇ ”ತುರ್ತು ಸ್ಪಂದನ ವ್ಯವಸ್ಥೆ-112”. ನಗರದ ಜನರು ತುರ್ತು ಸಂಧರ್ಭಗಳಲ್ಲಿ ಪೆÇಲೀಸ್, ಅಗ್ನಿ ಶಾಮಕ, ವಿಪತ್ತು ಬೇರೆ ಬೇರೆ ಸಹಾಯವಾಣಿಗೆ ಕರೆಮಾಡುವ ಅಗತ್ಯವಿಲ್ಲ. ಕೇವಲ 112 ಸಂಖ್ಯೆಗೆ ಕರೆ ಮಾಡಿದರೆ ಸಾಕು, ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ಸಾರ್ವಜನಿಕರಿಗೆ ಲಭಿಸಲಿದೆ.

ಮಂಗಳೂರು ನಗರ ಪೆÇೀಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಪಘಾತ, ಕೊಲೆ, ದರೋಡೆ, ಕಳ್ಳತನ, ಸುಲಿಗೆ, ಸರಗಳ್ಳತನ, ಜಗಳ, ಮಹಿಳಾ, ಮಕ್ಕಳ, ಹಿರಿಯ ನಾಗರಿಕರ, ಸಂಶಯವಿರುವ ವಾಹನ ಅಥವಾ ವ್ಯಕ್ತಿಗಳು ಇದ್ದಲ್ಲಿ ಹಾಗೂ ಇನ್ನಿತರ ಎಲ್ಲಾ ರೀತಿಯ ತುರ್ತು ಸ್ಪಂದನ ಸಹಾಯ ವ್ಯವಸ್ಥೆಗೆ, ಪೆÇಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡುವ ಮೊದಲು ಡಯಲ್ 112 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಈ ವ್ಯವಸ್ಥೆಯಲ್ಲಿ ನಿಮ್ಮ ಕರೆಯನ್ನು ಮೊದಲ ಆದ್ಯತೆ ಪರಿಗಣಿಸಿ ಹತ್ತಿರವಿರುವ ಪೆÇಲೀಸ್ ವಾಹನವನ್ನು ನೀವು ಇರುವ ಸ್ಥಳಕ್ಕೆ ಕಳುಹಿಸಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುವುದಾಗಿದೆ.

ಪೆÇಲೀಸ್ ನೆರವು/ ಅಗ್ನಿ ಶಾಮಕ ದಳದ ನೆರವು/ ವಿಪತ್ತು ನೆರವು ಸೇರಿದಂತೆ ಯಾವುದೇ ತುರ್ತು ಸಂಧರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೆÇೀರ್ಟ್ ಸಿಸ್ಟಮ್ (ಇ ಆರ್ ಎಸ್ ಎಸ್) ವ್ಯವಸ್ಥೆಯಡಿ ನಗರದ ಎಲ್ಲಿಂದಲೇ ಕರೆ ಬಂದರು ತುರ್ತಾಗಿ ಅಲ್ಲಿಗೆ ತಲುಪಿ ರಕ್ಷಣೆ ಒದಗಿಸಲಾಗುತ್ತದೆ.

ಸಾರ್ವಜನಿಕ ತುರ್ತು ಸ್ಪಂದನಾ ಸಹಾಯ ವ್ಯವಸ್ಥೆಗಾಗಿ ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 28 ಪೆಟ್ರೋಲಿಂಗ್ ವಾಹನಗಳನ್ನು ಈ ಕರ್ತವ್ಯಕ್ಕೆ ಬಳಸಲಾಗುತ್ತಿದ್ದು, ದಿನದ 24*7 ಕಾರ್ಯ ನಿರ್ವಹಿಸುತ್ತಿದೆ . ಇದರಲ್ಲಿ 21 ಹೊಯ್ಸಳ ಮತ್ತು 7 ಹೈವೇ ಪೆಟ್ರೋಲ್ ವಾಹನಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಸದರಿ ವ್ಯವಸ್ಥೆಯನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ತುರ್ತು ಸಂಧರ್ಭ ಸಾರ್ವಜನಿಕ ಸಂಕಷ್ಟಕ್ಕೆ ಸ್ಪಂದಿಸಲು “ಒಂದೇ ಭಾರತ, ಒಂದೇ ತುರ್ತು ಕರೆ-112” ಸಹಾಯವಾಣಿ ಆರಂಭ : ಮಂಗಳೂರಿನಲ್ಲಿ ತುರ್ತು ಸ್ಪಂದನೆ ಕರ್ತವ್ಯಕ್ಕೆ 28 ಪೆಟ್ರೋಲಿಂಗ್ ವಾಹನಗಳು Rating: 5 Reviewed By: karavali Times
Scroll to Top