ಬಂಟ್ವಾಳ, ಜೂನ್ 17, 2025 (ಕರಾವಳಿ ಟೈಮ್ಸ್) : ಕಾರಿಗೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಾಣೆಮಂಗಳೂರು ಹೆದ್ದಾರಿಯಲ್ಲಿ ಸೋಮವಾರ ಸಂಭವಿಸಿದೆ.
ಈ ಬಗ್ಗೆ ಪುತ್ತೂರು ತಾಲೂಕು ಬಲ್ನಾಡು ಗ್ರಾಮದ ನಿವಾಸಿ ಹರಿಪ್ರಸಾದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ಸೋಮವಾರ ಕಾರಿನಲ್ಲಿ ತನ್ನ ಹೆಂಡತಿ, ತಂದೆ ಹಾಗೂ ತಂದೆ ಕೆಲಸ ಮಾಡುವ ತೋಟದ ಮಾಲಿಕರನ್ನು ಕುಳ್ಳಿರಿಸಿಕೊಂಡು ತಂದೆಯ ಕಣ್ಣಿನ ಚಿಕಿತ್ಸೆ ಬಗ್ಗೆ ಮಂಗಳೂರು ಕಡೆ ಪ್ರಯಾಣಿಸುತ್ತಿದ್ದಾಗ ಪಾಣೆಮಂಗಳೂರು ರಾಣಾ ಮಾರ್ಬಲ್ ಎದುರುಗಡೆ ತಲುಪಿದಾಗ ಎದುರಿನಿಂದ ಬಂದ ಅಂದಯ್ಯ ಹಿರೆಮಠ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಕಾರಿನಲ್ಲಿದ್ದ ಚಾಲಕ ಸಹಿತ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment