ಪುತ್ತೂರು, ಜೂನ್ 04, 2025 (ಕರಾವಳಿ ಟೈಮ್ಸ್) : ಪುತ್ತೂರು ಅಂಚೆ ವಿಭಾಗದ ತ್ರೈಮಾಸಿಕ ಅಂಚೆ ಅದಾಲತ್ ಜೂನ್ 13 ರಂದು ಅಪರಾಹ್ನ 3 ಗಂಟೆಗೆ ಪುತ್ತೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.
ಈ ಅದಾಲತ್ತಿನಲ್ಲಿ ಪುತ್ತೂರು, ಕಡಬ, ಸುಳ್ಯ, ಬಂಟ್ವಾಳ, ಮೂಡಬಿದ್ರೆ, ಬೆಳ್ತಂಗಡಿ, ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗೆ ಸಂಬಂಧಪಟ್ಟ ಎಲ್ಲಾ ರೀತಿಯ ಸಾರ್ವಜನಿಕ ಕುಂದು ಕೊರತೆಗಳನ್ನು, ತಕರಾರುಗಳನ್ನು ಪರಿಶೀಲಿಸಲಾಗುವುದು.
ಸಾರ್ವಜನಿಕರು ಪುತ್ತೂರು ವಿಭಾಗಕ್ಕೆ ಸಂಬಂಧಪಟ್ಟ ದೂರುಗಳನ್ನು ಪತ್ರಮುಖೇನ, ಅಂಚೆ ಅದಾಲತ್ ತಲೆ ಬರಹದಡಿ 10.06.2025ರೊಳಗೆ ಹಿರಿಯ ಅಂಚೆ ಅಧೀಕ್ಷಕರು, ಪುತ್ತೂರು ವಿಭಾಗ, ಪುತ್ತೂರು-574201, ವಿಳಾಸಕ್ಕೆ ದೂರುಗಳನ್ನು ಕಳುಹಿಸಬಹುದು, ಹಾಗೆಯೇ ಅದೇ ದಿನ 3 ಗಂಟೆಯೊಳಗೆ ದೂರವಾಣಿ ಸಂಖ್ಯೆ 08251-230201,230295ಕ್ಕೆ ಅಥವಾ ವಾಟ್ಸಪ್ ಸಂಖ್ಯೆ 9448291073 ಗೆ ಅಥವಾ ನೇರವಾಗಿಯೂ ಸಂಪರ್ಕಿಸಬಹುದು. ತಮ್ಮ ದೂರುಗಳನ್ನು ಮಿಂಚಂಚೆ doputtur.ka@indiapost.gov.in ಮೂಲಕ ಅದಾಲತ್ತಿಗೆ ಮೊದಲು ತಲುಪುವಂತೆ ಕಳುಹಿಸುವುದು. ಪುತ್ತೂರು ಅಂಚೆ ವಿಭಾಗಕ್ಕೆ ಸಂಬಂಧಿಸಿದ ದೂರುಗಳನ್ನು ಮಾತ್ರ ಪರಿಗಣಿಸಲಾಗುವುದು ಎಂದು ಅಂಚೆ ಇಲಾಖೆಯ ಪುತ್ತೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment