ಚೊಚ್ಚಲ ಐಪಿಎಲ್ ಚಾಂಪಿಯನ್ ಆರ್.ಸಿ.ಬಿ. ಆಟಗಾರರಿಗೆ ವಿಧಾನಸೌಧ ಮುಂಭಾಗ ಸಿಎಂ ಸಿದ್ದರಾಮಯ್ಯ ಸನ್ಮಾನ - Karavali Times ಚೊಚ್ಚಲ ಐಪಿಎಲ್ ಚಾಂಪಿಯನ್ ಆರ್.ಸಿ.ಬಿ. ಆಟಗಾರರಿಗೆ ವಿಧಾನಸೌಧ ಮುಂಭಾಗ ಸಿಎಂ ಸಿದ್ದರಾಮಯ್ಯ ಸನ್ಮಾನ - Karavali Times

728x90

4 June 2025

ಚೊಚ್ಚಲ ಐಪಿಎಲ್ ಚಾಂಪಿಯನ್ ಆರ್.ಸಿ.ಬಿ. ಆಟಗಾರರಿಗೆ ವಿಧಾನಸೌಧ ಮುಂಭಾಗ ಸಿಎಂ ಸಿದ್ದರಾಮಯ್ಯ ಸನ್ಮಾನ

ಬೆಂಗಳೂರು, ಜೂನ್ 04, 2025 (ಕರಾವಳಿ ಟೈಮ್ಸ್) : 18 ವರ್ಷಗಳ ಸುದೀರ್ಘ ಯಾತ್ರೆಯ ಬಳಿಕ ಮೊದಲ ಬಾರಿ ಐಪಿಎಲ್ ಚಾಂಪಿಯನ್ಸ್ ಆಗಿ ಬೆಂಗಳೂರಿಗೆ ಆಗಮಿಸಿದ ಬೆಂಗಳೂರು ರಾಯಲ್ ಚಾಲೆಂಜರ್ಸ್ (ಆರ್ ಸಿ ಬಿ) ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ವಿಧಾನಸೌಧದ ಮುಂಭಾಗದ ಭವ್ಯ ಮೆಟ್ಟಿಲುಗಳ ಮೇಲೆ ಸನ್ಮಾನಿಸಿದರು.

ಸಂಜೆ 4:30ಕ್ಕೆ ಖಾಸಗಿ ಹೋಟೆ¯ಲಿನಿಂದ ಬಸ್ಸುಗಳಲ್ಲಿ ಆರ್ ಸಿ ಬಿ ತಂಡ ತಾವು ಗೆದ್ದ ಟ್ರೋಫಿಯೊಂದಿಗೆÀ ವಿಧಾನಸೌಧಕ್ಕೆ ಆಗಮಿಸಿತು. ರಾಷ್ಟ್ರಗೀತೆ ಹಾಗೂ ನಾಡಗೀತೆ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಎಲ್ಲಾ ಆಟಗಾರರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. 

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವರುಗಳಾದ ಜಮೀರ್ ಅಹ್ಮದ್ ಖಾನ್, ಡಾ. ಎಂ.ಸಿ. ಸುಧಾಕರ್ ಸಹಿತ ಹಲವು ಮಂದಿ ಗಣ್ಯರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಚೊಚ್ಚಲ ಐಪಿಎಲ್ ಚಾಂಪಿಯನ್ ಆರ್.ಸಿ.ಬಿ. ಆಟಗಾರರಿಗೆ ವಿಧಾನಸೌಧ ಮುಂಭಾಗ ಸಿಎಂ ಸಿದ್ದರಾಮಯ್ಯ ಸನ್ಮಾನ Rating: 5 Reviewed By: karavali Times
Scroll to Top