ಅಬ್ದುಲ್ ರಹಿಮಾನ್ ಕೊಲೆ, ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅಂದರ್, ಬಂಧಿತರ ಸಂಖ್ಯೆ 7ಕ್ಕೇರಿಕೆ - Karavali Times ಅಬ್ದುಲ್ ರಹಿಮಾನ್ ಕೊಲೆ, ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅಂದರ್, ಬಂಧಿತರ ಸಂಖ್ಯೆ 7ಕ್ಕೇರಿಕೆ - Karavali Times

728x90

3 June 2025

ಅಬ್ದುಲ್ ರಹಿಮಾನ್ ಕೊಲೆ, ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅಂದರ್, ಬಂಧಿತರ ಸಂಖ್ಯೆ 7ಕ್ಕೇರಿಕೆ

ಬಂಟ್ವಾಳ, ಜೂನ್ 03, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಮೇ 27 ರಂದು ಅಪರಾಹ್ನ ವೇಳೆ ನಡೆದ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೆÇಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. 

ಬಂಧಿತರನ್ನು ತೆಂಕಬೆಳ್ಳೂರು ಗ್ರಾಮದ ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ಗ್ರಾಮದ ತೇಜಾಕ್ಷ (24) ಎಂದು ಹೆಸರಿಸಲಾಗಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಪೆÇಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಮೂಲಕ ಬಂಧಿತರ ಒಟ್ಟು ಸಂಖ್ಯೆ 7ಕ್ಕೇರಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೆÇಲೀಸರು 5 ಮಂದಿ ಆರೋಪಿಗಳಾದ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪ್ರøಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ನಿವಾಸಿ ರವಿರಾಜ್ (23) ಎಂಬವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



  • Blogger Comments
  • Facebook Comments

0 comments:

Post a Comment

Item Reviewed: ಅಬ್ದುಲ್ ರಹಿಮಾನ್ ಕೊಲೆ, ಶಾಫಿ ಕೊಲೆಯತ್ನ ಪ್ರಕರಣ : ಮತ್ತಿಬ್ಬರು ಆರೋಪಿಗಳು ಅಂದರ್, ಬಂಧಿತರ ಸಂಖ್ಯೆ 7ಕ್ಕೇರಿಕೆ Rating: 5 Reviewed By: karavali Times
Scroll to Top