ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ರಾಯಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆ - Karavali Times ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ರಾಯಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆ - Karavali Times

728x90

23 June 2025

ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ರಾಯಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆ

 ಬಂಟ್ವಾಳ, ಜೂನ್ 23, 2025 (ಕರಾವಳಿ ಟೈಮ್ಸ್) : ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ, ಬಿಜೆಪಿ ಬಂಟ್ವಾಳ ಮಂಡಲ ಆಶ್ರಯದಲ್ಲಿ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ರಾಯಿ ಗ್ರಾಮ ಪಂಚಾಯತ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಯಿತು. 

ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬುಡಾ ಮಾಜಿ ಅಧ್ಯಕ್ಷ ಬಿ ದೇವದಾಸ ಶೆಟ್ಟಿ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ರಾಯಿಬೆಟ್ಟು, ಉಪಾಧ್ಯಕ್ಷೆ ಗುಣವತಿ ಪೂಜಾರಿ, ಬಂಟ್ವಾಳ ಬಿಜೆಪಿ ಮಂಡಲದ ಮಾಜಿ ಕಾರ್ಯದರ್ಶಿ ರಮಾನಾಥ ರಾಯಿ, ಪ್ರಮುಖರಾದ ದುರ್ಗಾದಾಸ್ ಶೆಟ್ಟಿ ಮಾವಂತೂರು, ಹರೀಶ್ ರಾಯಿ, ಚಂದ್ರಶೇಖರ ಗೌಡ ಕಾರಂಬಡೆ, ಸಂತೋಷ್ ಅಂಚನ್, ಆನಂದ ಬುರಾಲ್, ಜಯಂತ್ ಸಪಲ್ಯ, ರವೀಂದ್ರ ಪೂಜಾರಿ ಬದನಾಡಿ, ರಶ್ಮಿತ್ ಶೆಟ್ಟಿ ಕೈತ್ರೋಡಿ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ಸರಕಾರದ ಜನ ವಿರೋಧಿ ನೀತಿ ವಿರೋಧಿಸಿ ರಾಯಿ ಗ್ರಾಮ ಪಂಚಾಯತ್ ಎದುರು ಬಿಜೆಪಿ ಪ್ರತಿಭಟನೆ Rating: 5 Reviewed By: karavali Times
Scroll to Top