ಬಂಟ್ವಾಳ, ಜೂನ್ 15, 2025 (ಕರಾವಳಿ ಟೈಮ್ಸ್) : ಇಲ್ಲಿನ ವಿದ್ಯಾಗಿರಿ ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸಂಸತ್ ರಚನೆ ಇತ್ತೀಚೆಗೆ ನಡೆಯಿತು. ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನ ಪ್ರಕ್ರಿಯೆ ನಡೆಯಿತು.
ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಶ್ರೀಮತಿ ಶರ್ಮಿಳ ಮತ್ತು ಸಂಘದ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಚುನಾವಣಾ ಪ್ರಕ್ರಿಯೆ ನೆರವೇರಿತು. ಆಧುನಿಕ ತಂತ್ರಜ್ಞಾನದ ಮೂಲಕ ಎಲ್ಲಾ ವಿದ್ಯಾರ್ಥಿಗಳು ಮತಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕರಾಗಿ 10ನೇ ತರಗತಿ ವಿದ್ಯಾರ್ಥಿ ತನಿಷ್ ಆರ್ ಶೆಟ್ಟಿಗಾರ್, ಉಪನಾಯಕನಾಗಿ 9ನೇ ತರಗತಿ ವಿದ್ಯಾರ್ಥಿ ಯದ್ವಿತ್, ಯೋಜನಾಧಿಕಾರಿಯಾಗಿ 10ನೇ ತರಗತಿಯ ಅನುಷ್ಕ ಶೆಟ್ಟಿ ಅವರು ಆಯ್ಕೆಯಾದರು.
ಪ್ರೌಢಶಾಲಾ ಮುಖ್ಯೋಪಾಧ್ಯಾಯ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀದೇವಿ ಪಿ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವೀಣಾ ದೇವಾಡಿಗ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು.
0 comments:
Post a Comment