ಸತ್ತಿಕಲ್ಲು : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ - Karavali Times ಸತ್ತಿಕಲ್ಲು : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ - Karavali Times

728x90

8 June 2025

ಸತ್ತಿಕಲ್ಲು : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ

 ಬಂಟ್ವಾಳ, ಜೂನ್ 08, 2025 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ. 

ಶನಿವಾರ ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದಾಗಿ ಬಂದ ಮಾಹಿತಿ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸ್ಸೈ ಆಂಜನೇಯ ರೆಡ್ಡಿ ಜಿ ವಿ ಅವರ ನೇತೃತ್ವದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರಸ್ತೆಯ ಬಳಿಯಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಅವರನ್ನು ವಿಚಾರಿಸುವ ವೇಳೆ ಅವರು ಮಾದಕ ದ್ರವ್ಯ ಸೇವನೆ ಮಾಡಿದ ಬಗ್ಗೆ ಸಂಶಯಗೊಂಡು ವೈದ್ಯಕೀಯ ತಪಾಸಣೆಗಾಗಿ ಪುತ್ತೂರು ಸಾರ್ವಜನಿಕ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ವೈದ್ಯಾಧಿಕಾರಿಗಳು ಪರೀಕ್ಷಿಸಿ ಇಬ್ಬರ ಪೈಕಿ ಓರ್ವ ಕೆದಿಲ ಗ್ರಾಮದ ನಿವಾಸಿ ಮೊಹಮ್ಮದ್ ಖಲಂದರ್ ಶಾಫಿ (24) ಎಂಬಾತ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಸತ್ತಿಕಲ್ಲು : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ : ಓರ್ವ ಪೊಲೀಸ್ ವಶಕ್ಕೆ Rating: 5 Reviewed By: karavali Times
Scroll to Top