ಬಜ್ಪೆ : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ - Karavali Times ಬಜ್ಪೆ : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ - Karavali Times

728x90

3 June 2025

ಬಜ್ಪೆ : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ

ಮಂಗಳೂರು, ಜೂನ್ 03, 2025 (ಕರಾವಳಿ ಟೈಮ್ಸ್) : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ. 

ಬಂಧಿತ ಆರೋಪಿಯನ್ನು ಮೂಲತಃ ಬಜ್ಪೆ ಶಾಂತಿಗುಡ್ಡೆ ಬದ್ರಿಯಾ ಜುಮಾ ಮಸೀದಿ ಬಳಿ ನಿವಾಸಿ, ಪ್ರಸ್ತುತ ಕೆಂಜಾರು 313 ಅಪಾರ್ಟಮೆಂಟ್, ಫ್ಲ್ಯಾಟ್ ಸಂಖ್ಯೆ 605 ಇಲ್ಲಿ ವಾಸವಾಗಿರುವ ದಿವಂಗತ ಬಾವ ಅಬ್ದುಲ್ ರೆಹಮಾನ್ ಅವರ ಪುತ್ರ ಅಬ್ದುಲ್ ರಜಾಕ್ (59) ಎಂದು ಹೆಸರಿಸಲಾಗಿದೆ. 

ಈತ ಮೇ 1 ರಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. 

ಈತ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಂಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು ಅಲಿಯಾಸ್ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಯು ತಲೆ ಮರೆಸಿಕೊಳ್ಳಲು ಸಹಕರಿಸಿರುತ್ತಾನೆ ಎನ್ನಲಾಗಿದೆ. ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 



  • Blogger Comments
  • Facebook Comments

0 comments:

Post a Comment

Item Reviewed: ಬಜ್ಪೆ : ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top