ಮಾಣಿಲ : ನಾಲಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣು - Karavali Times ಮಾಣಿಲ : ನಾಲಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣು - Karavali Times

728x90

21 June 2025

ಮಾಣಿಲ : ನಾಲಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣು

ಬಂಟ್ವಾಳ, ಜೂನ್ 21, 2025 (ಕರಾವಳಿ ಟೈಮ್ಸ್) : ನಾಲಿಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯ ಸೀಟೌಟಿನ ಮಾಡಿನ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿಲ ಗ್ರಾಮದ ಮುರುವ ಸಮೀಪದ ಕೊಮ್ಮಂಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. 

ಮೃತ ವ್ಯಕ್ತಿಯನ್ನು ಇಲ್ಲಿನ ನಿವಾಸಿ ದಿವಂಗತ ಮದನ ಬಂಗೇರ ಅವರ ಪುತ್ರ ನಾರಾಯಣ ಬಂಗೇರ (48) ಎಂದು ಹೆಸರಿಸಲಾಗಿದೆ. ಕೃಷಿ ಮತ್ತು ಕೂಲಿ ಕೆಲಸ ಮಾಡಿಕೊಂಡು ಸಂಸಾರದೊಂದಿಗೆ ವಾಸವಾಗಿದ್ದ ಇವರು ನಾಲಿಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ಶುಕ್ರವಾರ ಮಧ್ಯಾಹ್ನ ಮನೆಯ ಸಿಟೌಟ್ ಮಾಡಿನ ಅಡ್ಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ಸಹೋದರ ಆನಂದ ಬಂಗೇರ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಯುಡಿಅರ್ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾಣಿಲ : ನಾಲಗೆ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಮನನೊಂದು ನೇಣಿಗೆ ಶರಣು Rating: 5 Reviewed By: karavali Times
Scroll to Top