ಬಂಟ್ವಾಳ, ಜೂನ್ 04, 2025 (ಕರಾವಳಿ ಟೈಮ್ಸ್) : ಅನಾರೋಗ್ಯದಿಂದ ಬಳಲುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾಯಾಗದೆ ಅವರು ಮೃತಪಟ್ಟ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ವ್ಯಕ್ತಿಯನ್ನು ಕೋಲಾರ ಮೂಲದ ಮುನಿರಾಜ್ ಎಂದು ಹೇಳಲಾಗಿದೆ. ಈ ಬಗ್ಗೆ ಸೋಣಂದೂರು ಗ್ರಾಮದ ಪಣಕಜೆ ನಿವಾಸಿ ರೋಶನ್ ಲೋಬೋ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮೇ 21 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಳ್ತಂಗಡಿ ತಾಲೂಕು, ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಮಹಾವೀರ ಮೆಡಿಕಲ್ ಬಳಿ ಒಬ್ಬ ಪ್ರಾಯಸ್ಥ ವ್ಯಕ್ತಿ ಆನಾರೋಗ್ಯದಿಂದ ಬಳಲುತ್ತಾ ಊಟಕ್ಕಾಗಿ ಅಂಗಲಾಚುತ್ತಿರುವುದನ್ನು ಕಂಡು ಅವರ ಬಳಿ ಹೋಗಿ ವಿಚಾರಿಸಿದಾಗ ಹೆಸರು ಮುನಿರಾಜ್, ಊರು ಕೋಲಾರ ಎಂದು ತಿಳಿಸಿದ್ದರು. ಅವರು ತೀವ್ರ ಅಸ್ವಸ್ಥರಾಗಿದ್ದರಿಂದ ಕೂಡಲೇ ಚಿಕಿತ್ಸೆ ಬಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರನ್ನು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾದೆ ಜೂನ್ 2 ರಂದು ಸಂಜೆ 7 ಗಂಟೆಗೆ ಮೃತಪಟ್ಟಿರುವುದಾಗಿ ವೈಧ್ಯರು ತಿಳಿಸಿರುತ್ತಾರೆ. ಮುನಿರಾಜ್ ಅವರು ಪ್ರಾಯಸ್ಥರಾಗಿದ್ದು ಆನಾರೋಗ್ಯದಿಂದ ಬಳಲುತ್ತಿದ್ದು ಇದೇ ಕಾರಣದಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment