ವಾಮದಪದವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಯಂತ್ರಶ್ರೀ ಕಾರ್ಯಕ್ರಮಕ್ಕೆ ಚಾಲನೆ - Karavali Times ವಾಮದಪದವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಯಂತ್ರಶ್ರೀ ಕಾರ್ಯಕ್ರಮಕ್ಕೆ ಚಾಲನೆ - Karavali Times

728x90

12 June 2025

ವಾಮದಪದವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಯಂತ್ರಶ್ರೀ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ, ಜೂನ್ 12, 2025 (ಕರಾವಳಿ ಟೈಮ್ಸ್) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಬಂಟ್ವಾಳ ತಾಲೂಕಿನ ವಾಮದಪದವು ಸದಾಶಿವ ಪೂಜಾರಿಯವರ ಮನೆಯಲ್ಲಿ ರೈತರಿಗೆ ರೈತ ಕ್ಷೇತ್ರ ಪಾಠ ಶಾಲೆ ಮೂಲಕ ಯಂತ್ರಶ್ರೀ ಕಾರ್ಯಕ್ರಮ ಆಯೋಜಿಸಲಾಯಿತು. 

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೃಷಿ ವಿಭಾಗ ಕೇಂದ್ರ ಕಛೇರಿಯ ಪ್ರಾದೇಶಿಕ ನಿರ್ದೇಶಕ ಮನೋಜ್ ಮೆನೇಜಸ್ ಮಾತನಾಡಿ, ಶ್ರೀ ಕ್ಷೇತ್ರದ ಮೂಲಕ ಮಂಗಳೂರುನಿಂದ ಗೋವಾ ತನಕ ದಾವಣಗೆರೆಯಿಂದ ಚಾಮರಾಜನಗರ ತನಕ ಯಂತ್ರಶ್ರೀ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ರೈತರು ರಬ್ಬರ್ ಮತ್ತು ಅಡಿಕೆಯನ್ನು ಮಾತ್ರ ಬೆಳೆದರೆ ಊಟ ಮಾಡಲು ಅನ್ನ ಬರುವುದಿಲ್ಲ. ಇದಕ್ಕೆ ಪರ್ಯಾಯವಾಗಿ ಸಂಸ್ಥೆಯಿಂದ 2010ರಲ್ಲಿ ಶ್ರೀ ಪದ್ದತಿ ಕಾರ್ಯಗಳನ್ನು ಪ್ರಾರಂಭಿಸಲಾಯಿತು ಎಂದರು. 

ಅಡಿಕೆ ಕೃಷಿ ರಾಜ್ಯದಲ್ಲಿ ವಿಸ್ತರಣೆ ಆಗಿದೆ. ಹಾಗೆಯೇ ಭತ್ತದ ಬೇಸಾಯಕ್ಕೆ ಎಲ್ಲಾ ರೈತರು ತನ್ನ ಮನೆಗೆ ಬೇಕಾಗುವಷ್ಟಾದರೂ ಭತ್ತ ಬೆಳೆಯಬೇಕು. ಭತ್ತದ ಕೃಷಿ ನಾಶವಾಗಬಾರದು ಎಂದ ಅವರು ಪ್ರಸ್ತುತ ಕೃಷಿ ಮಾಡಲು ಕಷ್ಟ ಇಲ್ಲ. ತಂತ್ರಜ್ಞಾನದ ಯುಗ ಪ್ರಾರಂಭವಾಗಿದೆ. ಶ್ರೀ ಕ್ಷೇತ್ರದ ಧರ್ಮಸ್ಥಳ ಮತ್ತು ಕೃಷಿ ಇಲಾಖೆ ಮೂಲಕ ಕೃಷಿ ಯಂತ್ರ ಧಾರೆ ಉಳುಮೆ ಮೂಲಕ, ಭಿತ್ತನೆಯ ಮೂಲಕ ಭತ್ತ ಕಟಾವು ಮಾಡಿ ಬೈಹುಲ್ಲು ಕಟ್ಟುವ ತನಕದ ಎಲ್ಲಾ ಯಂತ್ರಗಳು ಕೇಂದ್ರದಲ್ಲಿ ಲಭ್ಯವಿದೆ. ರಾಜ್ಯದಲ್ಲಿ 87 ತಾಲೂಕಿನಲ್ಲಿ 1 ಲಕ್ಷ 84,000 ಕುಟುಂಬದಲ್ಲಿ ಯಂತ್ರಶ್ರೀ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಕಳೆದ ವರ್ಷ ರಾಜ್ಯದಲ್ಲಿ 21,000 ಎಕರೆ ನಾಟಿ ಮಾಡಲಾಗಿದೆ. ಬಂಟ್ವಾಳ ತಾಲೂಕಿನ ಕಳೆದ ವರ್ಷ 500 ಎಕರೆ ನಾಟಿ ಮಾಡಿದ್ದು ಪ್ರಸ್ತುತ ವರ್ಷದಲ್ಲಿ ಇದೆ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದರಲ್ಲದೆ 2026 ರೈತ ಮಹಿಳೆಯರ ವರ್ಷ ಎಂದು ಘೋಷಣೆಯಾಗಿದೆ ಇನ್ನಷ್ಟು ಕೃಷಿಯಲ್ಲಿ ಆಸಕ್ತಿ ಬರಲಿ ಎಂದು ಹಾರೈಸಿದರು. 

ಕಾರ್ಯಕ್ರಮದಲ್ಲಿ ಯಂತ್ರಶ್ರೀ ಪೂರಕವಾಗಿ ಮಣ್ಣು ತಯಾರಿ, ಬೀಜ ತಯಾರಿ, ಸಸಿ ಮಾಡಿ ತಯಾರಿಯನ್ನು ಪ್ರಾಯೋಗಿಕವಾಗಿ ತೋರಿಸಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಜಯಾನಂದ, ಸಿ ಎಚ್ ಎಸ್ ಸಿ ಯೋಜನಾಧಿಕಾರಿ ಮೋಹನ್ ನವೀನ್ ಚಂದ್ರ ಶೆಟ್ಟಿ, ಸದಾಶಿವ ಪೂಜಾರಿ, ಭಾಸ್ಕರ್, ಸವಿತಾ, ಶಿವಕುಮಾರ್, ಪ್ರಕಾಶ್, ಚಂದಪ್ಪ, ಪ್ರಶಾಂತ್, ಶಂಕರ್ ಆನಂದ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ವಾಮದಪದವು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಯಂತ್ರಶ್ರೀ ಕಾರ್ಯಕ್ರಮಕ್ಕೆ ಚಾಲನೆ Rating: 5 Reviewed By: karavali Times
Scroll to Top