ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಳೆ ಹಾನಿ ಪ್ರಕರಣಗಳಿಗೆ ಹೆಚ್ಚುವರಿ ಸಹಾಯಧನ ನೀಡಿ : ಉಸ್ತುವಾರಿ ಸಚಿವರಿಗೆ ಪುರಸಭಾಧ್ಯಕ್ಷರ ಮನವಿ - Karavali Times ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಳೆ ಹಾನಿ ಪ್ರಕರಣಗಳಿಗೆ ಹೆಚ್ಚುವರಿ ಸಹಾಯಧನ ನೀಡಿ : ಉಸ್ತುವಾರಿ ಸಚಿವರಿಗೆ ಪುರಸಭಾಧ್ಯಕ್ಷರ ಮನವಿ - Karavali Times

728x90

1 June 2025

ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಳೆ ಹಾನಿ ಪ್ರಕರಣಗಳಿಗೆ ಹೆಚ್ಚುವರಿ ಸಹಾಯಧನ ನೀಡಿ : ಉಸ್ತುವಾರಿ ಸಚಿವರಿಗೆ ಪುರಸಭಾಧ್ಯಕ್ಷರ ಮನವಿ

ಬಂಟ್ವಾಳ, ಜೂನ್ 01, 2025 (ಕರಾವಳಿ ಟೈಮ್ಸ್) : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಮೇ 20 ರಿಂದ ನಿರಂತರವಾಗಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ, ಮನೆ ಕುಸಿತ, ತಡೆಗೋಡೆ ಕುಸಿತ, ಮರ ಬಿದ್ದು ಹಾನಿ, ನೇತ್ರಾವತಿ ತೀರದ ಮನೆಗಳಿಗೆ ನೆರೆ ಹಾನಿ ಇವೇ ಮೊದಲಾದ ಕಷ್ಟ-ನಷ್ಟಗಳು ಸಂಭವಿಸುತ್ತಿದೆ. ಈ ಎಲ್ಲ ಪ್ರಕರಣಗಳಿಗೆ ಸರಕಾರದ ವತಿಯಿಂದ ಸ್ವಲ್ಪ ಮಟ್ಟಿನ ಪರಿಹಾರ ಧನ ಒದಗಿಸುತ್ತಿರುವುದು ಸಾಮಾನ್ಯವಾಗಿದೆ. ಆದರೆ ಇಂತಹ ಪ್ರಕರಣಗಳಲ್ಲಿ ಜನರಿಗೆ ಉಪಯೋಗವಾಗುವಂತೆ ಪುರಸಭಾ ವ್ಯಾಪ್ತಿಯ ಪ್ರಕರಣಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಧನ ಒದಗಿಸಿಕೊಡುವಂತೆ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಶನಿವಾರ ಮನವಿ ಸಲ್ಲಿಸಿದ್ದಾರೆ. 

ಮನವಿ ಸ್ವೀಕರಿಸಿದ ಉಸ್ತುವಾರಿ ಸಚಿವರು ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪುರಸಭಾಧ್ಯಕ್ಷರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಳೆ ಹಾನಿ ಪ್ರಕರಣಗಳಿಗೆ ಹೆಚ್ಚುವರಿ ಸಹಾಯಧನ ನೀಡಿ : ಉಸ್ತುವಾರಿ ಸಚಿವರಿಗೆ ಪುರಸಭಾಧ್ಯಕ್ಷರ ಮನವಿ Rating: 5 Reviewed By: karavali Times
Scroll to Top