ಬಂಟ್ವಾಳ, ಜೂನ್ 03, 2025 (ಕರಾವಳಿ ಟೈಮ್ಸ್) : ರಸ್ತೆಯಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ಘನ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಸೋಮವಾರ ರಾತ್ರಿ ವೇಳೆ ನಡೆದಿದ್ದು, ಆರೋಪಿಗಳ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮವಾರ ರಾತ್ರಿ ಸುಮಾರು 8.45ರ ವೇಳೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಮಂಗಳಪದವು ಎಂಬಲ್ಲಿ ಕೆಲವು ಜನರು ಉದ್ದೇಶಪೂರ್ವಕವಾಗಿ ಅಕ್ರಮ ಕೂಟ ಸೇರಿಕೊಂಡು ವಿಟ್ಲ-ಕಲ್ಲಡ್ಕ ರಸ್ತೆಯಲ್ಲಿ ಹೋಗುವ ಲಾರಿಗಳನ್ನು ತಡೆದು ನಿಲ್ಲಿಸಿರುತ್ತಾರೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕಾಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸದ್ರಿ ರಸ್ತೆಯಲ್ಲಿ ಸಂಭವಿಸಿರುವ ಅಫಘಾತ ಪ್ರಕರಣಗಳನ್ನು ನೆಪವಾಗಿಟ್ಟುಕೊಂಡು ಆರೋಪಿಗಳಾದ ರಿಯಾಝ್, ಸಮದ್, ಕುಂಞÂ ಮೋನು, ರಹಿಮಾನ್, ಸಲೈಮಾನ್ ಸಹಿತ ಇತರ 25-30 ಜನರ ತಂಡ ರಸ್ತೆಯಲ್ಲಿ ಘನ ವಾಹನಗಳು ಸಂಚರಿಸದಂತೆ ತಡೆಯೊಡ್ಡಿರುವುದು ಹಾಗೂ ಸದ್ರಿ ರಸ್ತೆಯಲ್ಲಿ ಯಾವುದೇ ಘನ ಲಾರಿಗಳನ್ನು ಸಂಚರಿಸಲು ಬಿಡುವುದಿಲ್ಲ ಎಂಬುದಾಗಿ ಜೋರಾಗಿ ಬೊಬ್ಬೆ ಹಾಕಿರುವುದಾಗಿದೆ. ಮಜೀದ್ ಎಂಬವರು ಚಲಾಯಿಸುತ್ತಿದ್ದ ಮಣ್ಣು ಲೋಡ್ ಹೊಂದಿದ ಲಾರಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ನಿಲ್ಲಿಸಿ ಚಾಲಕ ಹಾಗೂ ಅದರಲ್ಲಿದ್ದ ಹಿದಾಯತ್ ಎಂಬವರನ್ನು ಲಾರಿಯಿಂದ ಇಳಿಸಿ ರಸ್ತೆಯಲ್ಲಿ ಲಾರಿಯನ್ನು ಸಂಚರಿಸದಂತೆ ಆರೋಪಿಗಳು ತಾಕೀತು ಮಾಡಿರುತ್ತಾರೆ ಎಂದು ದೂರಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ದ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment