ಧರ್ಮಸ್ಥಳ, ಜೂನ್ 23, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬೆಂಗಳೂರಿನ ವಕೀಲರ ಹೆಸರಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿರುತ್ತದೆ.
ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ, ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಠಾಣಾ ಪೊಲೀಸರು ಸಂಪರ್ಕಿಸಿದ್ದು, ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೆÇಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ದವಿರುವುದಾಗಿ ತಿಳಿಸಿರುತ್ತಾರೆ. ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ, ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
0 comments:
Post a Comment