ಬಂಟ್ವಾಳ, ಜೂನ್ 22, 2025 (ಕರಾವಳಿ ಟೈಮ್ಸ್) : ಮನುಷ್ಯನ ಸಾಧನೆಗೆ ಏಕಾಗ್ರತೆ ಆತ್ಯಮೂಲ್ಯ. ಯೋಗಾಭ್ಯಾಸದಿಂದ ವೈಯಕ್ತಿಕ ಹಾಗೂ ಸಾಮಾಜಿಕ ಜೀವನ ಬಲಗೊಳಿಸಲು ಸಾಧ್ಯವಿದೆ. ಅಮೂಲ್ಯವಾದ ಯೋಗ ವಿದ್ಯೆಯು ನಮ್ಮ ಸನಾತನ ಭಾರತೀಯರ ಕೊಡುಗೆ ಎಂದು ಯೋಗ ತರಬೇತುದಾರÀ ಚನ್ನಕೇಶವ ಡಿ ಆರ್ ಹೇಳಿದರು.
ಬಂಟ್ವಾಳ-ವಿದ್ಯಾಗಿರಿ ಎಸ್ ವಿ ಎಸ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ನಡೆದ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಳಿಪಟದಂತೆ ಹರಿದಾಡುವ ಮನಸ್ಸಿಗೆ ನಿತ್ಯ ಯೋಗಾಭ್ಯಾಸದಿಂದ ಹತೋಟಿಗೆ ತರಲು ಸಾಧ್ಯ ವಿದ್ಯಾರ್ಥಿಗಳು ಯೋಗವನ್ನು ಅಳವಡಿಸಿಕೊಂಡಲ್ಲಿ ಜೀವನದಲ್ಲಿ ಯಶಸ್ವಿಯಾಗಲು ಸಹಕಾರಿಯಾಗುತ್ತದೆ ಎಂದರು.
ಎಸ್ ವಿ ಎಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸುದರ್ಶನ್ ಬಿ, ಬಿ ಆರ್ ಎಂ ಪಿ ಸಿ ಪಬ್ಲಿಕ್ ಶಾಲಾ ಪ್ರಾಂಶುಪಾಲೆ ಪೂರ್ಣೇಶ್ವರಿ ಭಟ್, ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯ ಹರಿಪ್ರಸಾದ್, ವಿದ್ಯಾಸಂಸ್ಥೆಗಳ ಉಪನ್ಯಾಸಕರು, ಅಧ್ಯಾಪಕೇತರ ವರ್ಗದವರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದೇ ವೇಳೆ ಯೋಗ ತರಬೇತುದಾರÀ ಚನ್ನಕೇಶವ ಅವರು ವಿದ್ಯಾರ್ಥಿಗಳಿಗೆ ಯೋಗ ದಿನದ ಶಿಷ್ಟಾಚಾರದ ಅನುಸಾರ ವಿವಿಧ ಆಸನಗಳ ಪ್ರಾತ್ಯಕ್ಷಿಕೆ ನೀಡಿದರು.
ಎಸ್ ವಿ ಎಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಪದವಿಪೂರ್ವ ಕಾಲೇಜು ಉಪಪ್ರಾಂಶುಪಾಲ ಹಾಗೂ ಕಾಲೇಜು ಎನ್ ಸಿ ಸಿ ಅಧಿಕಾರಿ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ ಸ್ವಾಗತಿಸಿ, ಎನ್ ಸಿ ಸಿ ಅಧಿಕಾರಿ ರವಿ ವಂದಿಸಿದರು. ಜ್ಯೂನಿಯರ್ ಅಂಡರ್ ಆಫಿಸರ್ ಸ್ಫೂರ್ತಿ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment