ಮಂಗಳೂರು ಪೊಲೀಸರ ಕಾರ್ಯಾಚರಣೆ : ಇನ್ಸ್ಟಾಗ್ರಾಮಿನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅಂದರ್ - Karavali Times ಮಂಗಳೂರು ಪೊಲೀಸರ ಕಾರ್ಯಾಚರಣೆ : ಇನ್ಸ್ಟಾಗ್ರಾಮಿನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅಂದರ್ - Karavali Times

728x90

3 July 2025

ಮಂಗಳೂರು ಪೊಲೀಸರ ಕಾರ್ಯಾಚರಣೆ : ಇನ್ಸ್ಟಾಗ್ರಾಮಿನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅಂದರ್

ಮಂಗಳೂರು, ಜುಲೈ 03, 2025 (ಕರಾವಳಿ ಟೈಮ್ಸ್) : ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಮಾಜದ ಶಾಂತಿ ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟುಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿತ್ತು. 

ಸದ್ರಿ ಪೊಲೀಸ್ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಆರೋಪಿತ ಉಡುಪಿ ಜಿಲ್ಲೆ, ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದ ನಿವಾಸಿ ಸುರೇಶ್ ಎಂಬವರ ಪುತ್ರ ಆಶಿಕ್ ಎಸ್ ಕೋಟ್ಯಾನ್ (25) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ. 

ಈತನ ಮೇಲೆ ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 85/2025 ಕಲಂ 196, 353(2), 351(3) ಭಾರತೀಯ ನ್ಯಾಯ ಸಂಹಿತೆ-2023ರಂತೆ ಪ್ರಕರಣ ದಾಖಲಾಗಿ ಮುಂದಿನ ತನಿಖೆಗೆ ಸೆನ್ ಕ್ರೈಂ ಪೆÇಲೀಸ್ ಠಾಣೆಗೆ ವರ್ಗಾವಣೆ  ಮಾಡಲಾಗಿತ್ತು. 

ಪ್ರಕರಣದಲ್ಲಿ ಆರೋಪಿಯು ಸಾಮಾಜಿಕ ಜಾಲತಾಣವಾದ  ಇನ್ ಸ್ಟಾಗ್ರಾಮಿನಲ್ಲಿ “ನಮಗೆ ಯಾವುದೇ ರೀತಿಯ ಉತ್ತರಗಳು  ಬೇಡ, ರಕ್ತಕ್ಕೆ ರಕ್ತವೇ ಉತ್ತರವಾಗಬೇಕು, ಜೀವಕ್ಕೆ ಜೀವವೇ ಬೇಕು” ಎಂಬುದಾಗಿ ಸ್ಟೇಟಸ್  ಹಾಕಿದ್ದ. ಗುರುವಾರ ಪೊಲೀಸರು ಈತನನ್ನು ಪತ್ತೆ ಹಚ್ಚಿದ್ದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಪೊಲೀಸರ ಕಾರ್ಯಾಚರಣೆ : ಇನ್ಸ್ಟಾಗ್ರಾಮಿನಲ್ಲಿ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಅಂದರ್ Rating: 5 Reviewed By: karavali Times
Scroll to Top