ಕೊಳತ್ತಮಜಲು ರಹಿಮಾನ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ - Karavali Times ಕೊಳತ್ತಮಜಲು ರಹಿಮಾನ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ - Karavali Times

728x90

25 July 2025

ಕೊಳತ್ತಮಜಲು ರಹಿಮಾನ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ

 ಬಂಟ್ವಾಳ, ಜುಲೈ 25, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27 ರಂದು ಅಪರಾಹ್ನ ವೇಳೆ ನಡೆದ ಅಬ್ದುಲ್ ರಹಿಮಾನ್ ಎಂಬವರ ಹತ್ಯೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಮತ್ತೋರ್ವ ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪುದು ಗ್ರಾಮದ ನಿವಾಸಿ ಸಚಿನ್ ಅಲಿಯಾಸ್ ಸಚ್ಚು ರೊಟ್ಟಿ ಗುಡ್ಡೆ  (32) ಎಂದು ಹೆಸರಿಸಲಾಗಿದೆ.

ಬಂಧಿತನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಿದೆ. ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರಿದೆ.

  ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಒಟ್ಟು ಸಂಖ್ಯೆ 12ಕ್ಕೇರಿದೆ. 

ಈಗಾಗಲೇ ಪ್ರಕರಣದಲ್ಲಿ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದಿವಂಗತ ಯೋಗೀಶ್ ಪೂಜಾರಿ ಎಂಬವರ ಪುತ್ರ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರ-ಭದ್ರಕಾಳಿ ದೇವಸ್ಥಾನ ಹತ್ತಿರದ ನಿವಾಸಿ ಪ್ರಮೋದ್ ರಾಜ್ ಜೋಗಿ ಅವರ ಪುತ್ರ ಪೃಥ್ವಿರಾಜ್ (21) ಹಾಗೂ ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿ ಸುರೇಶ್ ಬೆಳ್ಚಡ ಅವರ ಪುತ್ರ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ನಿವಾಸಿ ಸುಮಿತ್ ಆಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ನಿವಾಸಿ ರವಿರಾಜ್ (23), ತೆಂಕಬೆಳ್ಳೂರು ಗ್ರಾಮದ ನಿವಾಸಿ ಅಭಿನ್ ರೈ (32), ಬಡಗಬೆಳ್ಳೂರು ಗ್ರಾಮದ ನಿವಾಸಿ ತೇಜಾಕ್ಷ (24), ಶೃಂಗೇರಿ ಬೆಟ್ಟಗೆರೆ ಗ್ರಾಮದ ನಿವಾಸಿ ರವಿ ಸಂಜಯ್ (29), ತುಂಬೆ ನಿವಾಸಿ ಶಿವಪ್ರಸಾದ್ (33), ಪುದು ಗ್ರಾಮದ ನಿವಾಸಿ ಪ್ರದೀಪ್ ಹಾಗೂ ಅಮ್ಮುಂಜೆ ಗ್ರಾಮದ ನಿವಾಸಿ ಶಾಹಿತ್ ಅಲಿಯಾಸ್ ಸಾಹಿತ್ (24) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೊಳತ್ತಮಜಲು ರಹಿಮಾನ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 12ಕ್ಕೇರಿಕೆ Rating: 5 Reviewed By: lk
Scroll to Top