8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು - Karavali Times

728x90

1 July 2025

8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಬಂಟ್ವಾಳ, ಜುಲೈ 01, 2025 (ಕರಾವಳಿ ಟೈಮ್ಸ್) : ಕೊಲೆಯತ್ನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಬಳಿಕ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಬಿ ಮೂಡ ಗ್ರಾಮದ ನಿವಾಸಿ ಅಕ್ಬರ್ ಸಿದ್ದೀಕ್ ಎಂದು ಹೆಸರಿಸಲಾಗಿದೆ. 2011 ರಲ್ಲಿ ತುಂಬೆ ಗ್ರಾಮದ ಅರಬನಗುಡ್ಡೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿರುವ ಈತ ಕಳೆದ ಸುಮಾರು 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ವಿರುದ್ದ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈತನನ್ನು ಸೋಮವಾರ ಧರ್ಮಸ್ಥಳದಲ್ಲಿ ದಸ್ತಗಿರಿ ಮಾಡಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿ ದಸ್ತಗಿರಿ ಮಾಡಿದ ಬಂಟ್ವಾಳ ಗ್ರಾಮಾಂತರ ಪೊಲೀಸರು Rating: 5 Reviewed By: karavali Times
Scroll to Top