2008ರ ಉಳ್ಳಾಲ ಪೊಲೀಸ್ ಠಾಣಾ ಪ್ರಕರಣದ ಆರೋಪಿ ಯಾಸೀನ್ ಭಟ್ಕಳ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು - Karavali Times 2008ರ ಉಳ್ಳಾಲ ಪೊಲೀಸ್ ಠಾಣಾ ಪ್ರಕರಣದ ಆರೋಪಿ ಯಾಸೀನ್ ಭಟ್ಕಳ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು - Karavali Times

728x90

24 July 2025

2008ರ ಉಳ್ಳಾಲ ಪೊಲೀಸ್ ಠಾಣಾ ಪ್ರಕರಣದ ಆರೋಪಿ ಯಾಸೀನ್ ಭಟ್ಕಳ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು

 ಮಂಗಳೂರು, ಜುಲೈ 25, 2025 (ಕರಾವಳಿ ಟೈಮ್ಸ್) : 2008 ರಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಭಯೋತ್ಪಾದನಾ ಪ್ರಕರಣದ ಆರೋಪಿಯಾಗಿದ್ದು ತಿಹಾರ್ ಜೈಲಿನಲ್ಲಿರುವ ಯಾಸೀನ್ ಭಟ್ಕಳನ್ನು ಪೊಲೀಸರು ಗುರುವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನ ವಿರುದ್ದ ಹಲವಾರು ವರ್ಷಗಳಿಂದ ಪ್ರಕರಣವು ವಿಚಾರಣೆಯಾಗದೇ ನ್ಯಾಯಾಲಯಯಲ್ಲಿ ಬಾಕಿಯಾಗಿತ್ತು. ಇದೀಗ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮೂಲಕ  ಆರೋಪಿಯ ವಿರುದ್ದ ಆರೋಪದ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಪುನರಾರಂಭಗೊಂಡಿದೆ.

ಈ ಪ್ರಕರಣದಲ್ಲಿ ಆರೋಪಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮಗದುಮ ಕಾಲನಿ ನಿವಾಸಿ ಯಾಸೀನ್ ಭಟ್ಕಳ ಅಲಿಯಾಸ್ ಶಾರೂಕ್ ಅಲಿಯಾಸ್ ಡಾಕ್ಟರ್ ಅರಾಜೂ ಅಲಿಯಾಸ್ ಯೂಸಫ್ ಅಲಿಯಾಸ್ ಇಮ್ರಾನ್ ಅಲಿಯಾಸ್ ಯಾಸೀರ್ ಅಹಮ್ಮದ್ ಎಂಬಾತ ಹೈದರಾಬಾದ್ ನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ದೆಹಲಿ ರಾಜ್ಯದ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಶಿಕ್ಷಾ ಖೈದಿಯಾಗಿ ಬಂಧನದಲ್ಲಿ ಇದ್ದವನನ್ನು ಹಲವಾರು ವರ್ಷಗಳಿಂದ  ನ್ಯಾಯಾಲಯಕ್ಕೆ ಹಾಜರುಪಡಿಸದೇ ಇರುವುದರಿಂದ ಈತನ ಮೇಲಿನ ಪ್ರಕರಣವು ಮಂಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದು, ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಕುರಿತಾಗಿ ಉಳ್ಳಾಲ ಪೊಲೀದಾಖಲಾಗಿತ್ತತುಧಿಕಾರಿ ಮತ್ತು ಸಿಬ್ಬಂದಿಗಳು ಸೂಕ್ತ ಪ್ರಕ್ರಿಯೆಯನ್ನು ಕೈಗೊಂಡು ದೆಹಲಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆರೋಪಿಯನ್ನು ವಿಡಿಯೋ ಕಾನ್ಪರೆನ್ಸ್ ಮುಖಾಂತರ ಗುರುವಾರ (ಜುಲೈ 24) ನ್ಯಾಯಾಲಯದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಾಜರುಪಡಿಸಿದ್ದು,  ಮುಂದಿನ ವಿಚಾರಣೆಯನ್ನು ಆಗಸ್ಟ್ 20 ರಂದು ನಿಗಧಿಪಡಿಸಲಾಗಿದೆ.


ದೇಶದ ವಿವಿಧ ಕಡೆಗಳಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಪೂರ್ವ ತಯಾರಿ ಆರೋಪದ ಮೇರೆಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಎಂಬಲ್ಲಿ ಅಪರಾಧಿಕ ಒಳ ಸಂಚನ್ನು ನಡೆಸಿ ಸ್ಪೋಟಕ ವಸ್ತುಗಳನ್ನು ಹಾಗೂ ಸ್ಪೋಟಕಗಳನ್ನು ತಯಾರಿಸುವ ವಸ್ತುಗಳನ್ನು ತಮ್ಮ ಬಳಿ ಇಟ್ಟುಕೊಂಡು ಭಯೋತ್ಪಾದನಾ  ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಗೆ ಸೇರಿದ ಆರೋಪಿಗಳನ್ನು 2008 ರ ಅಕ್ಟೋಬರ್ 4 ರಂದು ಹಿಂದಿನ ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಐಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ  ಅಪರಾಧ ಕ್ರಮಾಂಕ 242/2008 ಪ್ರಕರಣ ದಾಖಲಾಗಿತ್ತು.

 ಈ ಪ್ರಕರಣದಲ್ಲಿ ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರಾದ 7 ಜನ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದ್ದು, 6 ಜನ ಆರೋಪಿಗಳು ತಲೆಮರೆಸಿಕೊಂಡಿರುತ್ತಾರೆ.  

ಪ್ರಕರಣದಲ್ಲಿ ಆರೋಪಿಗಳ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿಗಳಾದ ಸಯ್ಯದ್ ಮೊಹಮ್ಮದ್ ನೌಶಾದ್, ಅಹಮ್ಮದ್ ಬಾವ ಅಬೂಬಕ್ಕರ್ ಹಾಗೂ ಫಕೀರ್ ಅಹಮ್ಮದ್ ಅಲಿಯಾಸ್ ಫಕೀರ್ ಎಂಬವರಿಗೆ ಈಗಾಗಲೇ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗಳಾದ ಮೊಹಮ್ಮದ್ ಆಲಿ, ಜಾವೇದ್ ಆಲಿ, ಮೊಹಮ್ಮದ್ ರಫೀಕ್ ಹಾಗೂ ಶಬ್ಬೀರ್ ಭಟ್ಕಳ್ ಎಂಬವರನ್ನು ಖುಲಾಸೆಗೊಳಿಸಿ 2017 ರ ಎಪ್ರಿಲ್ 12 ರಂದು ನ್ಯಾಯಾಲಯ ಅಂತಿಮ ತೀರ್ಪು ಹೊರಡಿಸಿರುತ್ತದೆ. ಆದರೆ ಸದ್ರಿ ಪ್ರಕರಣದ ನ್ಯಾಯಾಲಯದ ವಿಚಾರಣಾ ಕಾಲದಲ್ಲಿ ಯಾಸೀನ್ ಭಟ್ಕಳ ತಲೆಮರೆಸಿಕೊಂಡಿದ್ದ ಕಾರಣ ವಿಚಾರಣೆಯು ಬಾಕಿ ಇತ್ತು.

  • Blogger Comments
  • Facebook Comments

0 comments:

Post a Comment

Item Reviewed: 2008ರ ಉಳ್ಳಾಲ ಪೊಲೀಸ್ ಠಾಣಾ ಪ್ರಕರಣದ ಆರೋಪಿ ಯಾಸೀನ್ ಭಟ್ಕಳ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರು Rating: 5 Reviewed By: lk
Scroll to Top