ಬೆಳ್ತಂಗಡಿ, ಆಗಸ್ಟ್ 28, 2025 (ಕರಾವಳಿ ಟೈಮ್ಸ್) : ಲಾರಿ ಚಾಲಕನೋರ್ವ ರಸ್ತೆ ಬದಿ ಲಾರಿ ನಿಲ್ಲಿಸಿ ಇಳಿದು ಹೋಗುತ್ತಿದ್ದ ವೇಳೆ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಕಾಂಕ್ರಿಟ್ ಚರಂಡಿಯೊಳಗೆ ಬಿದ್ದು ಮೃತಪಟ್ಟ ಘಟನೆ ರೇಖ್ಯಾ ಗ್ರಾಮದ ನೇಲ್ಯಡ್ಕ ಎಂಬಲ್ಲಿ ಬುಧವಾರ ಮಧ್ಯರಾತ್ರಿ ವೇಳೆ ಸಂಭವಿಸಿದೆ.
ಮೃತ ಲಾರಿ ಚಾಲಕನನ್ನು ಬೆಂಗಳೂರು-ನೆಲಮಂಗಳ ನಿವಾಸಿ ಹುನಮಂತರಾಯಪ್ಪ (60) ಎಂದು ಹೆಸರಿಸಲಾಗಿದೆ. ಈ ಬಗ್ಗೆ ಅವರ ಪುತ್ರ ರಾಜಶೇಖರ್ ಅವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದು, ಇವರ ತಂದೆ ಹುನಮಂತರಾಯಪ್ಪ ಅವರು ಕೆಎ52 ಬಿ9011 ನೋಂದಣಿ ಸಂಖ್ಯೆಯ ಲಾರಿಯಲ್ಲಿ ಚಾಲಕರಾಗಿದ್ದು, ಆಗಸ್ಟ್ 27 ರಂದು ರಾತ್ರಿ ಸಮಯ ಮಂಗಳೂರಿನಿಂದ ಬೆಂಗಳೂರು ಕಡೆಗೆ ಲಾರಿ ಚಲಾಯಿಸಿಕೊಂಡು ಬಂದು ಮಧ್ಯರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಳ್ತಂಗಡಿ ತಾಲೂಕು ರೇಖ್ಯಾ ಗ್ರಾಮ ನೇಲ್ಯಡ್ಕ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಮೂತ್ರ ವಿಸರ್ಜನೆ ಅಥವಾ ಇನ್ಯಾವುದೋ ಕಾರಣಕ್ಕೆ ಲಾರಿಯಿಂದ ಇಳಿದು ರಸ್ತೆ ಬದಿಗೆ ಹೋಗುವ ಸಮಯ ಆಕಸ್ಮಿಕವಾಗಿ ರಸ್ತೆ ಕಾಮಗಾರಿಯಲ್ಲಿರುವ ಕಾಂಕ್ರೀಟ್ ಚರಂಡಿಯ ಒಳಗೆ ಬಿದ್ದಿದ್ದಾರೆ. ತೀವ್ರ ಅಸ್ವಸ್ಥರಾದ ಇವರನ್ನು ಚಿಕಿತ್ಸೆ ಬಗ್ಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.
0 comments:
Post a Comment