ಬಂಟ್ವಾಳ, ಆಗಸ್ಟ್ 12, 2025 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಮಾಸಿಕ ಸಭೆಯು ಬುಡಾ ಅಧ್ಯಕ್ಷ ಬೇಬಿ ಕುಂದರ್ ಅದ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಇತ್ತೀಚಿನ 9-11 ಗೊಂದಲಗಳನ್ನು ನಿವಾರಿಸುವ ಬಗ್ಗೆ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಪಂಚಾಯತ್ ಅಧ್ಯಕ್ಷರ ಜಂಟಿ ಸಭೆಯನ್ನು ಕರೆದು ಚರ್ಚಿಸುವಂತೆ ಹಾಗೂ ಬಂಟ್ವಾಳ ಕಸಬಾ ಗ್ರಾಮದ ಗಿರಿಗುಡ್ಡೆ ಕೆರೆ ಅಭಿವೃದ್ಧಿ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಕಡತವನ್ನು ಕಳುಹಿಸಿಕೊಡಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಸಭೆಯಲ್ಲಿ ಬುಡಾ ಸದಸ್ಯರಾದ ಮನೋಹರ್ ಕುಲಾಲ್, ಅಬ್ದುಲ್ ರಝಾಕ್, ಹರೀಶ್ ಅಜ್ಜಿಬೆಟ್ಟು, ಬುಡಾ ಸದಸ್ಯ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಡೊಂಬರ, ಅಮ್ಟಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲದಾಸ್ ಭಕ್ತ, ನರಿಕೊಂಬು ಗ್ರಾಮ ಪಂಚಾಯತ್ ಅಧಿಕಾರಿ ಹರೀಶ್, ಪುರಸಭಾ ಪ್ರತಿನಿಧಿ ಅಬ್ದುಲ್ ರಝಾಕ್ ಭಾಗವಹಿಸಿದ್ದರು.
0 comments:
Post a Comment