ಧರ್ಮಸ್ಥಳ-ಪಾಂಗಾಳದಲ್ಲಿ ನಡೆದ ಘರ್ಷಣೆ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 4 ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು - Karavali Times ಧರ್ಮಸ್ಥಳ-ಪಾಂಗಾಳದಲ್ಲಿ ನಡೆದ ಘರ್ಷಣೆ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 4 ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು - Karavali Times

728x90

7 August 2025

ಧರ್ಮಸ್ಥಳ-ಪಾಂಗಾಳದಲ್ಲಿ ನಡೆದ ಘರ್ಷಣೆ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 4 ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು

 ಧರ್ಮಸ್ಥಳ, ಆಗಸ್ಟ್ 07, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಲ ಕ್ರಾಸ್ ಎಂಬಲ್ಲಿ ಬುಧವಾರ ನಡೆದ ಅಹಿತಕರ ಘಟಣೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದೆ. 

ಬಂಟ್ವಾಳ ನಿವಾಸಿ ಅಜಯ್ ಎಂಬವರ ದೂರಿನಂತೆ, ಸದ್ರಿಯವರು ಕುಡ್ಲ ರಾಂಪೇಜ್ ಎಂಬ ಯುಟ್ಯೂಬ್ ಚಾನೆಲ್ ಮಾಲಕರಾಗಿದ್ದು, ಆ 6 ರಂದು ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ, ವ್ಯಕ್ತಿಯೊರ್ವರೊಂದಿಗೆ ವಿಡಿಯೊ ಬೈಟ್ ಮಾಡುತ್ತಿದ್ದಾಗ, ಸ್ಥಳಕ್ಕೆ ಸುಮಾರು 15 ರಿಂದ 50 ಜನರ ಕಿಡಿಗೇಡಿಗಳ ಗುಂಪು ಬಂದು, ಅವರಿಗೆ, ಕ್ಯಾಮೆರಾಮ್ಯಾನ್ ಸುಹಾಸ್, ಸಂಚಾರಿ ಸ್ಟುಡಿಯೋ ಇದರ ಸಂತೋಷ್ ಹಾಗೂ ಯುನೈಟೆಡ್ ಮೀಡಿಯಾದ ಅಭಿಷೇಕ್ ಎಂಬವರುಗಳಿಗೆ ಹಲ್ಲೆ ನಡೆಸಿ, ಕ್ಯಾಮರಾ ರಸ್ತೆಗೆಸೆದು ಹಾನಿಗೊಳಿಸಿದ್ದಲ್ಲದೆ, ಅದರಲ್ಲಿದ್ದ ಮೆಮೊರಿ ಕಾರ್ಡ್ ಕಳವು ಮಾಡಿ, ಬಳಿಕ ಜೀವ ಬೆದರಿಕೆ ಒಡ್ಡಿರುತ್ತಾರೆ ಎಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 46/2025 ಕಲಂ 189(2), 191(2), 115(2), 324(5), 352, 307 ಜೊತೆಗೆ 190 ಬಿ.ಎನ್.ಎಸ್-2023 ರಂತೆ ಪ್ರಕರಣದ ದಾಖಲಾಗಿದೆ. 

2ನೆ ಪ್ರಕರಣದಲ್ಲಿ ಬುಧವಾರ ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಾಂಗಳ ಕ್ರಾಸ್ ಎಂಬಲ್ಲಿ ಸುಮಾರು 25 ರಿಂದ 50 ಜನರು, ಎರಡು ಪ್ರತ್ಯೇಕ ಗುಂಪುಗಳಾಗಿ ಅಪರಾಧಿಕ ಕೃತ್ಯ ನಡೆಸಲು ಅಕ್ರಮ ಕೂಟ ಸೇರಿದ್ದು, ಈ ವೇಳೆ ಸ್ಥಳಕ್ಕೆ ಬಂದ ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕರು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು, ಯಾವುದೇ ಅಹಿತಕರ ಘಟನೆಗೆ ನಡೆಸದೇ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡ್ಡಿಪಡಿಸಿ, ಸೇರಿದ್ದ ಗುಂಪುಗಳು ಪರಸ್ಪರ ಗಲಾಟೆ ನಡೆಸಿರುವುದಾಗಿದೆ ಎಂಬ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಅಪರಾಧ ಕ್ರಮಾಂಕ 47/2025 ಕಲಂ 189(2), 191(2), 132, 324(6) ಜೊತೆಗೆ 190 ಬಿ ಎನ್ ಎಸ್ ರಂತೆ ಸುಮೋಟೊ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. 

3ನೇ ಪ್ರಕರಣದಲ್ಲಿ ಬುಧವಾರ ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ, ಸುಮಾರು 50-100 ಮಂದಿ, ಧರ್ಮಸ್ಥಳ ಠಾಣಾ ಆವರಣ ಮುಂದೆ ಯಾವುದೇ ಪೂರ್ವಾನುಮತಿಯಿಲ್ಲದೇ, ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿರುತ್ತಾರೆ. ಅವರುಗಳ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 48/2025 ಕಲಂ 189(2) ಜೊತೆಗೆ 190 ಬಿ ಎನ್ ಎಸ್ ಪ್ರಕಾರ ಸುಮೋಟೊ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.  

4ನೇ ಪ್ರಕರಣದಲ್ಲಿ ಬುಧವಾರ ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ, ಯೂಟ್ಯೂಬರ್ಸ್‍ಗಳಿಗೆ ಹಲ್ಲೆ ನಡೆದಿರುವ ವಿಚಾರ ತಿಳಿದು ಸದ್ರಿ ಸ್ಥಳಕ್ಕೆ ಬಂದ ಬೆಳ್ತಂಗಡಿ ನಿವಾಸಿ ಪ್ರಮೋದ್ ಕುಮಾರ್ ಶೆಟ್ಟಿ (42) ಎಂಬವರಿಗೆ, ಅಲ್ಲಿ ಸೇರಿದ್ದ ಸುಮಾರು 30 ರಿಂದ 40 ಜನರ ಗುಂಪು ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾರೆ. ಸ್ಥಳದಲ್ಲಿದ್ದ ಎರಡು ವಾಹನಗಳಿಗೆ ಹಾಗೂ ಕ್ಯಾಮರಾಕ್ಕೆ ಹಾನಿಗೊಳಿಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 49/2025 ಕಲಂ 189(2), 191(2), 115(2), 110, 324(3), 352, 351(2) ಜೊತೆಗೆ 190 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. 

ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು, ಮೊದಲನೇ ಪ್ರಕರಣದಲ್ಲಿ ಬೆಂಗಳೂರು ನಿವಾಸಿ ಹರೀಶ್ ಆರ್ (34) ಎಂಬವರ ದೂರಿನಂತೆ, ಸದ್ರಿಯವರು ಏಷಿಯನೆಟ್ ಸುವರ್ಣ ಎಂಬ ಖಾಸಗಿ ಚಾನೆಲ್  ಕ್ರೈಂ ರಿಪೊರ್ಟರ್ ಆಗಿದ್ದು, ಇವರು ಬುಧವಾರ ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ನಡೆದ ಹಲ್ಲೆಯ ಗಾಯಾಳುಗಳ ಬಗ್ಗೆ ವರದಿ ಮಾಡಲು ಉಜಿರೆ ಬೆನಕ ಆಸ್ಪತ್ರೆಯ ಬಳಿ ತೆರಳಿರುತ್ತಾರೆ. ಈ ವೇಳೆ ಸದ್ರಿ ಸ್ಥಳದಲ್ಲಿದ್ದ ಗಿರೀಶ್ ಮಟ್ಟಣ್ಣನವರ್ ಎಂಬವರೊಂದಿಗೆ ವಿಡಿಯೋ ಬೈಟ್ ಕೊಡುವಂತೆ ಕೇಳಿದಾಗ, ಆರೋಪಿತರು ಏಕಾಏಕಿ ಬೈದಿರುತ್ತಾರೆ. ಸ್ಥಳದಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರೊಂದಿಗಿದ್ದ ಇತರರು ಹಲ್ಲೆ ನಡೆಸಿ ಅವ್ಯಾಚವಾಗಿ ಬೈದಿರುತ್ತಾರೆ. ಆ ವೇಳೆ ಸ್ಥಳಕ್ಕೆ ಬಂದ ಮತ್ತೋರ್ವ ಆರೋಪಿ ಸಮೀರ್ ಯೂಟ್ಯೂಬರ್ಸ್ ಎಂಬಾತ ಜೀವ ಬೆದರಿಕೆ ಹಾಕಿರುತ್ತಾನೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 75/2025 ಕಲಂ 189(2), 191(1) (2), 115(2), 351(2), 352 ಜೊತೆಗೆ 190 ಬಿಎನ್‍ಎಸ್-2023 ಪ್ರಕಾರ ಪ್ರಕರಣ ದಾಖಲಾಗಿದೆ.


2ನೇ ಪ್ರಕರಣದಲ್ಲಿ ಬೆಳ್ತಂಗಡಿ ನಿವಾಸಿ ಗಣೇಶ್ ಶೆಟ್ಟಿ (28) ಎಂಬವರ ದೂರಿನಂತೆ, ಇವರು ಆಗಸ್ಟ್ 6 ರಂದು ಧರ್ಮಸ್ಥಳದ ಪಾಂಗಳ ಎಂಬಲ್ಲಿ ಹಲ್ಲೆಗೊಳಗಾದವರನ್ನು ಚಿಕಿತ್ಸೆಗಾಗಿ ಉಜಿರೆ ಬೆನಕಾ ಆಸ್ಪತ್ರೆಗೆ ವಾಹನವೊಂದರಲ್ಲಿ ಕರೆತಂದಿದ್ದು, ಗಾಯಾಳುಗಳನ್ನು ನೋಡಲು ಬಂದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರನ್ನು ಬೈಟ್ ಕೊಡುವಂತೆ ಆರೋಪಿ ಸುವರ್ಣ ನ್ಯೂಸ್ ವರದಿಗಾರ ಹಾಗೂ ಕ್ಯಾಮರಾಮೆನ್ ತಡೆದು ನಿಲ್ಲಿಸಿರುತ್ತಾರೆ. ಸದ್ರಿಯವರು ಬೈಟ್ ಕೊಡಲು ನಿರಾಕರಿಸಿದಾಗ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ, ತಳ್ಳಾಟ ನಡೆಸಿರುತ್ತಾರೆ. ಈ ಘಟನೆ ನಡೆದು ಕೆಲ ಹೊತ್ತಿನಲ್ಲಿ ಸುವರ್ಣ ಸುದ್ದಿ ವಾಹಿನಿಯಲ್ಲಿ ಅಜಿತ್ ಹನುಮಕ್ಕನವರ್  ಎನ್ನುವ ನ್ಯೂಸ್ ಆಂಕರ್ “ಸುವರ್ಣ ನ್ಯೂಸ್ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿಯಿಂದ ಹಲ್ಲೆ” ಎಂದು ಸುಳ್ಳು ಸುದ್ದಿ ಪ್ರಸಾರ ಮಾಡಿರುವುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 76/2025 ಕಲಂ 126(2), 296, 351 ಜೊತೆಗೆ 3(5) ಬಿಎನ್‍ಎಸ್-2023 ಪ್ರಕಾರ ಪ್ರಕರಣ ದಾಖಲಾಗಿದೆ.

3ನೇ ಪ್ರಕರಣದಲ್ಲಿ ಆಗಸ್ಟ್ 6 ರಂದು ಸಂಜೆ ಧರ್ಮಸ್ಥಳ ಪಾಂಗಳ ಕ್ರಾಸ್ ನಲ್ಲಿ ನಡೆದ ಹಲ್ಲೆಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಬೆಳ್ತಂಗಡಿ ಉಜಿರೆ ಬೆನಕ ಆಸ್ಪತ್ರೆಯ ಬಳಿ ಸಾರ್ವಜನಿಕರು ಜಮಾವಣೆಗೊಂಡಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೆÇಲೀಸ್ ಠಾಣಾ ಪೆÇಲೀಸ್ ಉಪನಿರೀಕ್ಷಕರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿದಾಗ, ಸದ್ರಿ ಸ್ಥಳದಲ್ಲಿ ಸುಮಾರು 50 ರಿಂದ 100 ಜನರು ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ, ಘೋಷಣೆಗಳನ್ನು ಕೂಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಸದಂತೆ ಹಾಗೂ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಪೂರ್ವಾನುಮತಿ ಪಡೆಯದೇ ಅಕ್ರಮ ಕೂಟ ಸೇರಿ ಪೆÇಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

  • Blogger Comments
  • Facebook Comments

0 comments:

Post a Comment

Item Reviewed: ಧರ್ಮಸ್ಥಳ-ಪಾಂಗಾಳದಲ್ಲಿ ನಡೆದ ಘರ್ಷಣೆ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 4 ಹಾಗೂ ಬೆಳ್ತಂಗಡಿ ಠಾಣೆಯಲ್ಲಿ 3 ಪ್ರಕರಣ ದಾಖಲು Rating: 5 Reviewed By: karavali Times
Scroll to Top