ಮಂಗಳೂರು, ಆಗಸ್ಟ್ 14, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.
ಆಗಸ್ಟ್ 16 ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಆಗಸ್ಟ್ 19 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ¯, ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಆಗಸ್ಟ್ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಶಿಬಿರ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
































0 comments:
Post a Comment