ಖೋಟಾ ನೋಟು ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಬಂಧನ - Karavali Times ಖೋಟಾ ನೋಟು ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಬಂಧನ - Karavali Times

728x90

26 August 2025

ಖೋಟಾ ನೋಟು ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಬಂಧನ

 ಮಂಗಳೂರು, ಆಗಸ್ಟ್ 26, 2025 (ಕರಾವಳಿ ಟೈಮ್ಸ್) : ಖೋಟಾ ನೋಟು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಸೋಮವಾರ ಉಪ್ಪಿನಂಗಡಿ ಬಳಿಯ ವಳಾಲು ಎಂಬಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೂಲತಃ ಬಂಟ್ವಾಳ ತಾಲೂಕು, ಬಿ ಮೂಡ ಗ್ರಾಮದ ಜೋಡುಮಾರ್ಗ ಅಂಚೆ ವ್ಯಾಪ್ತಿಯ ತಲಪಾಡಿ-ನಿಜಾಮ್ ಮಂಝಿಲ್ ನಿವಾಸಿ, ಪ್ರಸ್ತುತ ಒಳಾಲು ಬಜತ್ತೂರು ಮದ್ರಸ ಹತ್ತಿರದ ದಾವೂದ್ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮೊಹಮ್ಮದ್ ಕೆ ಎ ಎಂಬವರ ಪುತ್ರ ನಿಜಾಮುದ್ದೀನ್ ಅಲಿಯಾಸ್ ನಿಜಾಮ್ (33) ಎಂದು ಹೆಸರಿಸಲಾಗಿದೆ. 

ಈತನ ಮೇಲೆ 2023 ರಲ್ಲಿ ಮಂಗಳೂರು ಪೂರ್ವ ಪೆÇಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 01/2023 ಕಲಂ 489 (ಬಿ) ಮತ್ತು (ಸಿ) ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿ ನ್ಯಾಯಲಯದಲ್ಲಿ ವಿಚಾರಣೆಯಲ್ಲಿದ್ದು, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿದ್ದ ಈತ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಮೇಲೆ 8  ಬಾರಿ ಬಂಧನ ವಾರಂಟ್ ಹೊರಡಿಸಿದೆ. 

ಮಂಗಳೂರು ಪೂರ್ವ ಪೆÇಲೀಸ್ ಠಾಣಾ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ವಾರಂಟ್ ಜ್ಯಾರಿ ಸಿಬ್ಬಂದಿಗಳು ಈತನನ್ನು ಆಗಸ್ಟ್ 25 ರಂದು ಖಚಿತ ಮಾಹಿತಿ ಮೇರೆಗೆ ಉಪ್ಪಿನಂಗಡಿ ಬಳಿಯ ವಲಾಲು ಎಂಬಲ್ಲಿಂದ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಮೇರೆಗೆ ಆರೋಪಿಯ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿಲಾಗಿದೆ.

ಈತನ ಮೇಲೆ ಮಂಗಳೂರು ಪೂರ್ವ ಪೆÇಲೀಸ್ ಠಾಣೆ (ನ್ಯಾಯಲಯ ಈತನ ಮೇಲೆ ದಸ್ತಗಿರಿ ವಾರಂಟ್ ಹೊರಡಿಸಿದೆ), ಮಂಗಳೂರು ದಕ್ಷಿಣ ಪೆÇಲೀಸ್ ಠಾಣೆ (ಪ್ರಸ್ತುತ ನ್ಯಾಯಾಲಯವು ಈತನ ಮೇಲೆ ದಸ್ತಗಿರಿ ವಾರೆಂಟ್ ಹೊರಡಿಸಿದೆ), ಮಡಿವಾಳ ಪೆÇಲೀಸ್ ಠಾಣೆ (ಪ್ರಸ್ತುತ ನ್ಯಾಯಾಲಯವು ಈತನ ಮೇಲೆ ಉದ್ಘೋಷಣೆ ಹೊರಡಿಸಿದೆ), ಕುಶಾಲ ನಗರ ಗ್ರಾಮಾಂತರ ಪೆÇಲೀಸ್ ಠಾಣೆ, (ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ), ಮಂಗಳೂರು-ಬರ್ಕೆ ಪೆÇಲೀಸ್ ಠಾಣೆ (ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ), ಪುತ್ತೂರು ನಗರ ಪೆÇಲೀಸ್ ಠಾಣೆ (ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ), ವಿಟ್ಲ ಪೆÇಲೀಸ್ ಠಾಣೆ (ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ.) ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಖೋಟಾ ನೋಟು ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಬಂಧನ Rating: 5 Reviewed By: karavali Times
Scroll to Top