ಬಂಟ್ವಾಳ, ಆಗಸ್ಟ್ 14, 2025 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಕಚೇರಿ ಏಜೆಂಟರುಗಳ ಅಡ್ಡೆಯಾಗಿದೆ. ಇಲ್ಲಿನ ಮಧ್ಯವರ್ತಿಗಳಿಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ. ಅಧಿಕಾರಿ-ಸಿಬ್ಬಂದಿಗಳು ಕೂಡಾ ಬ್ರೋಕರುಗಳ ಮಧ್ಯಸ್ಥಿಕೆ ಇಲ್ಲದೆ ಯಾವುದೇ ಕೆಲಸ ನಡೆಯುವುದಿಲ್ಲ ಎಂದು ಇಲ್ಲಿನ ಸಾರ್ವಜನಿಕರು ದೂರು ನೀಡಿದ್ದು, ಈ ಬಗ್ಗೆ ನಿಗಾ ವಹಿಸಲಾಗುವುದು ಎಂದು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಹೇಳಿದ್ದಾರೆ. ಬುಧವಾರ ಸಂಜೆ ಇಲ್ಲಿನ ಡಿಟಿ ಸಹಿತ ಮೂವರು ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡಾಗಿ ಲೋಕಾ ಬಲೆಗೆ ಬಿದ್ದ ಘಟನೆ ಬಳಿಕ ಅವರನ್ನು ತೀವ್ರ ವಿಚಾರಣೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಸ್ಪಿ ಈ ಬಗ್ಗೆ ಗರಂ ಆಗಿ ಪ್ರತಿಕ್ರಯಿಸಿದ್ದಾರೆ.
14 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment