ಮೂವರು ವಾರಂಟ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಂಟ್ವಾಳ ಪೊಲೀಸರು - Karavali Times ಮೂವರು ವಾರಂಟ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಂಟ್ವಾಳ ಪೊಲೀಸರು - Karavali Times

728x90

17 September 2025

ಮೂವರು ವಾರಂಟ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಂಟ್ವಾಳ ಪೊಲೀಸರು

ಬಂಟ್ವಾಳ, ಸೆಪ್ಟೆಂಬರ್ 17, 2025 (ಕರಾವಳಿ ಟೈಮ್ಸ್) : ಬಂಟ್ವಾಳ ಹಾಗೂ ವಿಟ್ಲ ಪೊಲೀಸ್ ಠಾಣಾ ಪ್ರಕರಣಗಳಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

ಬಂಟ್ವಾಳ ಎಸಿಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದಲ್ಲಿ ಸಿಸಿ ನಂಬರ್ 1540/2016 ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 198/2016 ಕಲಂ 457, 380, 411 ಐಪಿಸಿ ಮತ್ತು ಸಿಸಿ ನಂಬರ್ 806/2017 ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 99/2016 ಕಲಂ 457, 380, 411 ಐಪಿಸಿ ಪ್ರಕರಣಗಳಲ್ಲಿ ವಾರೆಂಟ್ ಅಸಾಮಿಯಾದ ಮಂಗಳೂರು ತಾಲೂಕು ಮಲ್ಲೂರು ನಿವಾಸಿ ಸುನಿಲ್ (35) ಎಂಬಾತನನ್ನು ಬುಧವಾರ ವಾಮಂಜೂರಿನಲ್ಲಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ಎರಡೂ ವಾರೆಂಟುಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 

ಬಂಟ್ವಾಳ ಎಸಿಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದ ಸಿಸಿ ನಂಬರ್ 1540/2016, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 198/2016 ಕಲಂ 457, 380, 411 ಐಪಿಸಿ ಹಾಗೂ ಸಿಸಿ ನಂಬರ್ 806/2017 ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 99/2016 ಕಲಂ 457, 380, 411 ಐಪಿಸಿ ಪ್ರಕರಣದಲ್ಲಿ ವಾರೆಂಟ್ ಅಸಾಮಿ ಕೊಡುಗು ಜಿಲ್ಲೆ, ಮಡಿಕೇರಿ ನಿವಾಸಿ ಗಣೇಶ್ (41) ಎಂಬಾತನನ್ನು ಬುಧವಾರ ನೀರುಮಾರ್ಗ ಎಂಬಲ್ಲಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಲಯ ಜಾಮೀನು ನೀಡಿ ಬಿಡುಗಡೆಗೊಳಿಸಿದೆ. 

ವಿಟ್ಲ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 219/2018 ಕಲಂ 269, 270, 278 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿ ಅಹ್ಮದ್ ಗಜನಿ (39) ಎಂಬಾತನ ಮೇಲೆ ಪ್ರಕರಣ ದಾಖಲಾಗಿ 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಕೊಂಡಿದ್ದು, ಆತನಿಗೆ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ಈತನನ್ನು ಪೊಲೀಸರು ಮಂಗಳವಾರ ಕ್ಯಾಲಿಕಟ್ ರಿಕ್ಷಾ ನಿಲ್ದಾಣದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಈತನಿಗೆ ನ್ಯಾಯಾಲಯವು ಜಾಮೀನು ಬಿಡುಗಡೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಮೂವರು ವಾರಂಟ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಂಟ್ವಾಳ ಪೊಲೀಸರು Rating: 5 Reviewed By: karavali Times
Scroll to Top