ಬಂಟ್ವಾಳ, ಸೆಪ್ಟೆಂಬರ್ 05, 2025 (ಕರಾವಳಿ ಟೈಮ್ಸ್) : ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಪ್ತಿಯ ತುಂಬೆ ಬಳಿ ಆಗಸ್ಟ್ 14 ರಂದು ನಡೆದ ಜಾನುವಾರು ಕಳವು ಹಾಗೂ ಮರುದಿನ ಅದರ ಅಂಗಾಂಗ ಪತ್ತೆಯಾದ ಪ್ರಕರಣ ಬೇಧಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಉಳ್ಳಾಲ-ಚೆಂಬುಗುಡ್ಡೆ ನಿವಾಸಿ ಇರ್ಶಾದ್ (34), ಮಂಗಳೂರು-ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48) ಹಾಗೂ ಮಂಗಳೂರು-ಕಣ್ಣೂರು ನಿವಾಸಿ ಅಬ್ದುಲ್ ಅಝೀಂ (18) ಎಂದು ಹೆಸರಿಸಲಾಗಿದೆ.
ಆಗಸ್ಟ್ 14 ರಂದು ತುಂಬೆ ಬಳಿ ಜಾನುವಾರು ಕಳವು ಹಾಗೂ ಅದರ ಅಂಗಾಗಗಳು ಮರುದಿನ ಅಲ್ಲೆ ಸಮೀಪದಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಶುಕ್ರವಾರ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿಚಾರಣೆಯ ವೇಳೆ ಗುರುವಾರ (ಆಗಸ್ಟ್ 4) ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲೂ ಆರೋಪಿಗಳಾಗಿರುವುದು ತಿಳಿದುಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
0 comments:
Post a Comment