ಮಂಗಳೂರು, ಸೆಪ್ಟೆಂಬರ್ 14, 2025 (ಕರಾವಳಿ ಟೈಮ್ಸ್) : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಅರಿವು ಮೂಡಿಸಲು ಬೆಂಗಳೂರಿಗೆ ಹೊರಟ ಬೈಕ್ ಜಾಥಾಗೆ ಭಾನುವಾರ ಕದ್ರಿ ಪಾರ್ಕಿನಲ್ಲಿ ಚಾಲನೆ ನೀಡಲಾಯಿತು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಹಸಿರು ನಿಶಾನೆ ತೋರಿಸಿ ಮಾತನಾಡಿ, ಭಾರತವು ಜಗತ್ತಿನಲ್ಲಿಯೇ ಬಲಿಷ್ಠ ಸಂವಿಧಾನ ಹೊಂದಿರುವ ರಾಷ್ಟ್ರವಾಗಿದ್ದು, ಪ್ರತಿಯೊಬ್ಬರಿಗೂ ಹಕ್ಕು ಮತ್ತು ಕರ್ತವ್ಯಗಳನ್ನು ಒದಗಿಸಿದೆ. ನಾಗರಿಕರು ದೇಶದ ಪ್ರಗತಿಗೆ ಸದಾ ತಮ್ಮನ್ನು ಮುಡಿಪಾಗಿಡಬೇಕು ಎಂದರು.
ಜಿ ಪಂ ಉಪ ಕಾರ್ಯದರ್ಶಿ ಜಯಲಕ್ಷ್ಮಿ, ಸಮಾಜ ಕಲ್ಯಾಣ ಇಲಾಖಾ ಉಪನಿರ್ದೇಶಕಿ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ ಅಡಿಗ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment