ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿ ಲೋಕ ಅದಾಲತಿನಲ್ಲಿ ಒಂದುಗೂಡಿದರು - Karavali Times ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿ ಲೋಕ ಅದಾಲತಿನಲ್ಲಿ ಒಂದುಗೂಡಿದರು - Karavali Times

728x90

13 September 2025

ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿ ಲೋಕ ಅದಾಲತಿನಲ್ಲಿ ಒಂದುಗೂಡಿದರು

ಮಂಗಳೂರು, ಸೆಪ್ಟೆಂಬರ್ 13, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ಕಾರ್ಯಕ್ರಮವು ವಿಚ್ಚೇಧನಕ್ಕೆ ಮುಂದಾಗಿದ್ದ ದಂಪತಿಯನ್ನು ಒಂದುಗೂಡಿಸುವಲ್ಲಿ ಯಶಸ್ವಿಯಾಯಿತು.

ಹರೀಶ್- ಶಶಿಕಲಾ ಎಂಬ ದಂಪತಿಯು ದಾಂಪತ್ಯ ಭಿನ್ನಾಭಿಪ್ರಾಯಗಳಿಂದ ವಿಚ್ಚೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನಂತರ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನಿಸಿ, ಗಂಡ ಹೆಂಡತಿಯ ಮಧ್ಯೆ ಸಂಧಾನ ನಡೆಸಿ, ಒಂದುಗೂಡಿ ದಾಂಪತ್ಯ ಜೀವನ ಮುಂದುವರೆಸುವುದರ ಬಗ್ಗೆ ಉಭಯ ಪಕ್ಷಗಾರರಿಗೆ ಮನವರಿಕೆ ಮಾಡಲಾಗಿದೆ. ಸಂಧಾನಕ್ಕೆ ಒಪ್ಪಿ, ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು.

ಅದರಂತೆ ಶನಿವಾರ ಲೋಕ ಅದಾಲತಿಗೆ ಆಗಮಿಸಿದ್ದ ಹರೀಶ್-ಶಶಿಕಲಾ ದಂಪತಿಯು ಪ್ರಧಾನ ಜಿಲ್ಲಾ ನ್ಯಾಯಾಧೀಶ ಬಸವರಾಜ ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮೂಲಕ ಒಂದಾಗಿದ್ದು, ಪ್ರಕರಣ ಸುಖಾಂತ್ಯಗೊಂಡಿದೆ. 

ಈ ಸಂದರ್ಭ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು, ನ್ಯಾಯಾವಾದಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ವಿಚ್ಛೇದನಕ್ಕೆ ಮುಂದಾಗಿದ್ದ ದಂಪತಿ ಲೋಕ ಅದಾಲತಿನಲ್ಲಿ ಒಂದುಗೂಡಿದರು Rating: 5 Reviewed By: karavali Times
Scroll to Top