ಕೂಳೂರು : ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್ ಸವಾರೆಯ ಮೇಲೆ ಲಾರಿ ಹರಿದು ದಾರುಣ ಸಾವು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಹಾಗೂ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು - Karavali Times ಕೂಳೂರು : ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್ ಸವಾರೆಯ ಮೇಲೆ ಲಾರಿ ಹರಿದು ದಾರುಣ ಸಾವು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಹಾಗೂ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು - Karavali Times

728x90

9 September 2025

ಕೂಳೂರು : ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್ ಸವಾರೆಯ ಮೇಲೆ ಲಾರಿ ಹರಿದು ದಾರುಣ ಸಾವು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಹಾಗೂ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು

ಮಂಗಳೂರು, ಸೆಪ್ಟೆಂಬರ್ 09, 2025 (ಕರಾವಳಿ ಟೈಮ್ಸ್) : ಕೂಳೂರಿನಲ್ಲಿ ಮಂಗಳವಾರ ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್ ಸವಾರೆ, ಸುರತ್ಕಲ್-ಕುಳಾಯಿ ನಿವಾಸಿ ಶ್ರೀಮತಿ ಮಾಧವಿ (44) ಎಂಬವರ ಮೇಲೆ ಲಾರಿ ಹರಿದು ಮೃತಪಟ್ಟ ದಾರುಣ ಘಟನೆಗೆ ಸಂಬಂಧಪಟ್ಟಂತೆ ಲಾರಿ ಚಾಲಕ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಾಗಿದೆ. 

ಶ್ರೀಮತಿ ಮಾಧವಿ ಅವರು ತಮ್ಮ ಸ್ಕೂಟರಿನಲ್ಲಿ ಕುಳಾಯಿ ಕಡೆಯಿಂದ ಕುಂಟಿಕಾನ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸವಾರಿ ಮಾಡಿಕೊಂಡು ಬರುತ್ತಿದ್ದ ಅವಧಿಯಲ್ಲಿ ಬೆಳಿಗ್ಗೆ 8.30 ರವೇಳೆಗೆ ಕೂಳೂರಿನ ರಾಯಲ್ ಓಕ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿದ್ದ ದೊಡ್ಡ ಗುಂಡಿಯ ಪರಿಣಾಮ ಸ್ಕೂಟರ್ ಸಮೇತ ಬಿದ್ದಿದ್ದು, ಇದೇ ವೇಳೆ ಹಿಂದಿನಿಂದ ಅಂದರೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯನ್ನು ಅದರ ಚಾಲಕ ಮೊಹಮ್ಮದ್ ಫಾರೂಕ್ ಎಂಬವರು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ರಸ್ತೆ ಬದಿ ಬಿದ್ದಿದ್ದ ಮಾಧವಿಯವರ ಮೇಲೆ ಲಾರಿಯ ಚಕ್ರವು ಹರಿದು ಗಂಭೀರ ಸ್ವರೂಪದ ಗಾಯಗೊಂಡು ಮೃತಪಟ್ಟಿದ್ದರು. 

ಅಪಘಾತಕ್ಕೆ ಹೆದ್ದಾರಿ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸದೇ, ರಸ್ತೆಯಲ್ಲಿ ಆಗಿರುವ ರಸ್ತೆ ಗುಂಡಿಗಳನ್ನು ಮುಚ್ಚದೇ ನಿರ್ಲಕ್ಷ್ಯತನದಿಂದ ಅಪಘಾತಕ್ಕೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯವರ ಮೇಲೆ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿರುವ ಲಾರಿ ಚಾಲಕನ ಮೇಲೆ ಮಂಗಳೂರು ಸಂಚಾರ ಉತ್ತರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 224/2025 ಕಲಂ 281, 106(1) ಬಿ ಎನ್ ಎಸ್ ಮತ್ತು 198(ಎ) ಐಎಂವಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೆÇಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೂಳೂರು : ರಸ್ತೆ ಗುಂಡಿಗೆ ಬಿದ್ದ ಸ್ಕೂಟರ್ ಸವಾರೆಯ ಮೇಲೆ ಲಾರಿ ಹರಿದು ದಾರುಣ ಸಾವು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಹಾಗೂ ಲಾರಿ ಚಾಲಕನ ವಿರುದ್ದ ಪ್ರಕರಣ ದಾಖಲು Rating: 5 Reviewed By: karavali Times
Scroll to Top