ಮಂಗಳೂರು, ಸೆಪ್ಟೆಂಬರ್ 23, 2025 (ಕರಾವಳಿ ಟೈಮ್ಸ್) : ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೆಪ್ಟೆಂಬರ್ 24 ರಂದು ಬುಧವಾರ ಮಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಿಗ್ಗೆ 10.05ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 10.30ಕ್ಕೆ ನಗರದ ಟಿಎಂಎ ಫೈ ಕನ್ವೆಂಷನ್ ಸೆಂಟರಿನಲ್ಲಿ ಮಂಗಳೂರು ಟೆಕ್ನೋವಂಜಾ-2025 ಕಾರ್ಯಕ್ರಮ, ಮಧ್ಯಾಹ್ನ 12ಕ್ಕೆ ದೇರಳಕಟ್ಟೆಯ ನಿಟ್ಟೆ ಯುನಿವರ್ಸಿಟಿ ಸೆಂಟರ್ ಫಾರ್ ಸೈನ್ಸ್ ಎಜುಕೇಶನ್ ಆಂಡ್ ರಿಸರ್ಚ್ ಇಲ್ಲಿ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಅಕ್ವಮರೈನ್ ಇನ್ನೋವೇಶನ್ ಗೆ ಭೇಟಿ, 1.30ಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ, 3 ಗಂಟೆಗೆ ಮಂಗಳೂರು ಡಬ್ಲ್ಯು ಆರ್ ಕೆ ಡಬ್ಲ್ಯು ಆರ್ ಕೆ ಕಚೇರಿಗೆ ಭೇಟಿ, ಸಂಜೆ 4ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, 6.15ಕ್ಕೆ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
0 comments:
Post a Comment