ಮಂಗಳೂರು, ಸೆಪ್ಟೆಂಬರ್ 22, 2025 (ಕರಾವಳಿ ಟೈಮ್ಸ್) : ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೆಪ್ಟೆಂಬರ್ 25 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಪರಾಹ್ನ 2.55ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ಅಪರಾಹ್ನ 3:30ಕ್ಕೆ ಮಂಗಳೂರು ಆರ್ ಟಿ ಓ ಕಚೇರಿಯಲ್ಲಿ ಸಾರಿಗೆ ಇಲಾಖೆಯ ಶಿವಮೊಗ್ಗ ವಲಯದ ಸಾರಿಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ, ನಂತರ ಮುಡಿಪು ಭಾರಿ ವಾಹನಗಳ ಚಾಲಕರ ತರಬೇತಿ ಕೇಂದ್ರಕ್ಕೆ ಭೇಟಿ. ರಾತ್ರಿ 10:45ಕ್ಕೆ ಸಚಿವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
22 September 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment