ಅಕ್ಟೋಬರ್ 20 ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಮುಖ್ಯಮಂತ್ರಿಗಳಿಂದ ಉದ್ಘಾಟನೆ, ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ : ಶಾಸಕ ಅಶೋಕ್ ರೈ - Karavali Times ಅಕ್ಟೋಬರ್ 20 ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಮುಖ್ಯಮಂತ್ರಿಗಳಿಂದ ಉದ್ಘಾಟನೆ, ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ : ಶಾಸಕ ಅಶೋಕ್ ರೈ - Karavali Times

728x90

14 September 2025

ಅಕ್ಟೋಬರ್ 20 ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಮುಖ್ಯಮಂತ್ರಿಗಳಿಂದ ಉದ್ಘಾಟನೆ, ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ : ಶಾಸಕ ಅಶೋಕ್ ರೈ

ಪುತ್ತೂರು, ಸೆಪ್ಟೆಂಬರ್ 14, 2025 (ಕರಾವಳಿ ಟೈಮ್ಸ್) : ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆಯುವ ದೀಪಾವಳಿ ಕಾರ್ಯಕ್ರಮ “ಅಶೋಕ ಜನಮನ” ಈ ಬಾರಿ ಅಕ್ಟೋಬರ್ 20 ರಂದು ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶಾಸಕರ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಟ್ರಸ್ಟ್ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇದ್ದು ಪ್ರತೀ ವರ್ಷದಂತೆ ಈ ಬಾರಿಯೂ ವಸ್ತ್ರದ ಜೊತೆ ಗಿಫ್ಟ್ ಉಡುಗೊರೆಯಾಗಿ ನೀಡಲಾಗುವುದು ಎಂದರು. 

ಪುತ್ತೂರಿನ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದ್ದು ಕಾರ್ಯಕ್ರಮಕ್ಕೆ ಅಗಮಿಸುವ ಜನರಿಗೆ ಊಟದ ವ್ಯವಸ್ಥೆ, ಹಾಗೂ ಬೆಳಿಗ್ಗೆ ಮತ್ತು ಸಂಜೆ ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಕಳೆದ ವರ್ಷ ಸುಮಾರು 85 ಸಾವಿರ ಮಂದಿಗೆ ವಸ್ತ್ರ ವಿತರಣೆ ಮಾಡಲಾಗಿದ್ದು ಈ ಬಾರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿಗೆ ವಸ್ತ್ರದಾನ ಮಾಡಲಾಗುವುದು ಎಂದು ಶಾಸಕರು ಹೇಳಿದರು.

ಮುಖ್ಯಮಂತ್ರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭಾಧ್ಯಕ್ಷರ ಸಹಿತ ಅನೇಕ ಸಚಿವರು ಭಾಗವಹಿಸಲಿದ್ದಾರೆ. ರಾಜಕೀಯ ರಹಿತವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಇತರೆ ರಾಜಕೀಯ, ಧಾರ್ಮಿಕ, ಸಾಮಾಜಿಕ ಪ್ರಮುಖರು ಭಾಗವಹಿಸಲಿದ್ದಾರೆ ಎಂದ ಶಾಸಕ ರೈ ಕಾರ್ಯಕ್ರಮದಲ್ಲಿ ಗೂಡು ದೀಪ ಸ್ಪರ್ಧೆ, ಅರ್ಹ ಬಡ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ ಎಂದರು. 

ಸಭೆಯಲ್ಲಿ ಟ್ರಸ್ಟ್ ಗೌರವ ಸಲಹೆಗಾರ ಸುಮಾ ಅಶೋಕ್ ರೈ, ಟ್ರಸ್ಟ್ ಪ್ರಮುಖರಾದ ಉಮಾನಾಥ ಶೆಟ್ಟಿ ಪೆರ್ನೆ, ಎಂ ಎಸ್ ಮಹಮ್ಮದ್, ಮಹಮ್ಮದ್ ಬಡಗನ್ನೂರು, ನಿಹಾಲ್ ಪಿ ಶೆಟ್ಟಿ, ನಿರಂಜನ್ ರೈ ಮಠಂತಬೆಟ್ಟು, ಕೃಷ್ಣಪ್ರಸಾದ್ ಆಳ್ವ, ಜಯಪ್ರಕಾಶ್ ಬದಿನಾರ್, ಈಶ್ವರ ಭಟ್ ಪಂಜಿಗುಡ್ಡೆ, ಕೇಶವ ಭಂಡಾರಿ ಕೈಪ, ರಿತೇಶ್ ಶೆಟ್ಟಿ, ರಾಧಾಕೃಷ್ಣ ಬೊಳ್ಳಾಜೆ ಸುಳ್ಯ, ಕೃಷ್ಣ ಪ್ರಸಾದ್ ಭಟ್ ಬೊಳ್ಳಾವು ಮೊದಲಾದವರು ಭಾಗವಹಿಸಿದ್ದರು. 

ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಸೆಟ್ಟಿ ಸ್ವಾಗತಿಸಿ, ಯೋಗೀಶ್ ಸಾಮಾನಿ ವಂದಿಸಿದರು. ಬಾಲಕೃಷ್ಣ ಕೊಡಿಪ್ಪಾಡಿ, ಶಾಸಕರ ಕಚೇರಿ ಸಿಬಂದಿಗಳಾದ ಲಿಂಗಪ್ಪ, ರಚನಾ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 20 ರಂದು ‘ಅಶೋಕ ಜನಮನ’ ಕಾರ್ಯಕ್ರಮ, ಮುಖ್ಯಮಂತ್ರಿಗಳಿಂದ ಉದ್ಘಾಟನೆ, ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ : ಶಾಸಕ ಅಶೋಕ್ ರೈ Rating: 5 Reviewed By: karavali Times
Scroll to Top