ಮಂಗಳೂರು, ಸೆಪ್ಟೆಂಬರ್ 21, 2025 (ಕರಾವಳಿ ಟೈಮ್ಸ್) : ಮಂಗಳೂರು ಪೂರ್ವ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 135/2016 ಕಲಂ 323, 324, 354 ಹಾಗೂ 149 ಐಪಿಸಿ ಪ್ರಕರಣದಲ್ಲಿ ಮಂಗಳೂರು 6ನೇ ಜೆ ಎಂ ಎಫ್ ಸಿ ನ್ಯಾಯಾಲಯದ ಸಿ ಸಿ ನಂಬರ್ 1059/2018 ರಂತೆ ವಿಚಾರಣೆಯಲ್ಲಿರುವ ಪ್ರಕರಣದಲ್ಲಿ ನ್ಯಾಯಾಲಯವು ಕಳೆದ ಒಂದು ವರ್ಷದಿಂದ 9 ಬಾರಿ ವಾರೆಂಟ್ ಹೊರಡಿಸಿದ್ದರು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಪೆರವಾಡ್ ಪೆಟ್ರೋಲ್ ಪಂಪ್ ಹತ್ತಿರದ ಓ ಎಂ ವಿಲ್ಲ, ವಳಪೆಲ್ ಮನೆ ನಿವಾಸಿ ಅಂದುಂಞÂ ಎಂಬವರ ಪುತ್ರ ಹನೀಫ್ ಅಲಿಯಾಸ್ ಅಬ್ದುಲ್ ಹನೀಫ್ ಎಂಬಾತನ ವಿರುದ್ಧ ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ ಬಗ್ಗೆ ಕಲಂ 269 ಬಿ ಎನ್ ಎಸ್-2023 ರಂತೆ ಈತನ ಪತ್ತೆಗಾಗಿ ಪ್ರಯತ್ನವನ್ನು ಮುಂದುವರಿಸಿದ ಮಂಗಳೂರು ಪೂರ್ವ ಪೆÇಲೀಸ್ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಎಎಸ್ಸೈ ಮಚೇಂದ್ರನಾಥ್ ಜೋಗಿ, ಎಚ್ ಸಿ ನಾರಪ್ಪ ಕೆ ಬಿ ಅವರು ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಈತನಿಗೆ 4 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
21 September 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment