ಸುಳ್ಯ, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 115/2018 ಕಲಂ 504, 354(ಎ) ಐಪಿಸಿ ಪ್ರಕರಣದಲ್ಲಿನ ಆರೋಪಿ ರವಿಂದ್ರ ಬಿ ಎನ್ (40) ಎಂಬವರು ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಎಲ್ ಪಿ ಸಿ ನಂಬರ್ 04/2023 ರಂತೆ ವಾರೆಂಟ್ ಹೊರಡಿಸಲಾಗಿದ್ದು, ಎಲ್ ಪಿ ಸಿ ವಾರೆಂಟ್ ಆಸಾಮಿಯಾದ ರವೀಂದ್ರನನ್ನು ಸೆ 7 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡಿರುವ ಸುಳ್ಯ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
8 September 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment