ಬಂಟ್ವಾಳ, ಸೆಪ್ಟೆಂಬರ್ 22, 2025 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2015 ಹಾಗೂ 2016 ರಲ್ಲಿ ನಡೆದ 2 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ-ಕೂಳೂರು ನಿವಾಸಿ ಅಶ್ರಫ್ ಅಲಿಯಾಸ್ ಚಿಲ್ಲಿ ಅಶ್ರಫ್ (32) ಎಂಬಾತನನ್ನು ಭಾನುವಾರ ಮಂಜೇಶ್ವರ-ಕೂಳೂರಿನಲ್ಲಿ ವಿಟ್ಲ ಪೊಲೀಸರು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪೇಟೆಯಲ್ಲಿ 2015ರ ಆಗಸ್ಟ್ 7 ರಂದು ಜಗದೀಶ್ ಕಾಮತ್ ಎಂಬವರಿಗೆ ಮೆಣಸಿನ ಪುಡಿ ಎರಚಿ ದರೋಡೆ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ಈತ ತಲೆಮರೆಸಿಕೊಂಡಿದ್ದು. ಈ ಬಗ್ಗೆ ಎಲ್ ಪಿ ಸಿ-03/2025 ರಂತೆ ವಾರೆಂಟ್ ಜಾರಿಯಾಗಿರುತ್ತದೆ.
2016 ರ ಜನವರಿ 23 ರಂದು ಕೊಳ್ನಾಡು ಗ್ರಾಮದ ವೈನ್ ಶಾಪ್ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಬಗ್ಗೆ ದಾಖಲಾಗಿದ್ದ ಪ್ರಕರಣದಲ್ಲೂ ದಸ್ತಗಿರಿಯಾಗದೆ ತಲೆಮರೆಸಿಕೊಂಡಿದ್ದು, ಈ ಬಗ್ಗೆಯೂ ನ್ಯಾಯಾಲಯದಿಂದ 82 ಮತ್ತು 83 ವಾರಂಟ್ ಜಾರಿಯಾಗಿತ್ತು.
ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


















0 comments:
Post a Comment