ಬಂಟ್ವಾಳ, ಸೆಪ್ಟೆಂಬರ್ 04, 2025 (ಕರಾವಳಿ ಟೈಮ್ಸ್) : ಶಾಲೆಯಿಂದ ಮಗನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಶ್ರಫ್ ಡಿ (33) ಎಂದು ಹೆಸರಿಸಲಾಗಿದೆ. ಮಹಿಳೆ ಬುಧವಾರ ಸಂಜೆ ವೇಳೆ ದ್ವಿಚಕ್ರ ವಾಹನದಲ್ಲಿ ತನ್ನ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಾ ಮನೆಯ ಸಮೀಪ ತಲುಪುತ್ತಿದ್ದಂತೆ ಆರೋಪಿ ಕತ್ತಿಯನ್ನು ಹಿಡಿದುಕೊಂಡು ಬಂದು ಸ್ಕೂಟರಿನಲ್ಲಿದ್ದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ, ಕತ್ತಿಯಿಂದ ಹಲ್ಲೆಗೆ ಯತ್ನಿಸಿರುತ್ತಾನೆ. ಈ ವೇಳೆ ಮಹಿಳೆಯ ಬೆರಳುಗಳಿಗೆ ತೀವ್ರ ಸ್ವರೂಪದ ಗಾಯವಾಗಿರುತ್ತದೆ. ಈ ವೇಳೆ ಬೊಬ್ಬೆ ಕೇಳಿ ಮಹಿಳೆಯ ತಾಯಿ ಹಾಗೂ ನೆರೆಕೆರೆಯವರು ಓಡಿ ಬರುತ್ತಿರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ತೆರಳಿರುತ್ತಾನೆ. ಹಲ್ಲೆಗೊಳಗಾದ ಮಹಿಳೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಅಶ್ರಫ್ ಎಂಬಾತನನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
0 comments:
Post a Comment