ಬಂಟ್ವಾಳ, ಅಕ್ಟೋಬರ್ 30, 2025 (ಕರಾವಳಿ ಟೈಮ್ಸ್) : ಅಪಘಾತದ ಗಾಯಾಳುಗಳನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸ್ಕೂಟರ್ ಸವಾರ ಅಡ್ಡಿಪಡಿಸಿದ ಘಟನೆ ಬಿ ಸಿ ರೋಡಿನಲ್ಲಿ ಅ 30 ರಂದು ನಡೆದಿದ್ದು, ಈ ಬಗ್ಗೆ ಸ್ಕೂಟರ್ ಸವಾರನ ವಿರುದ್ದ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಬ್ಯುಲೆನ್ಸಿಗೆ ಅಡ್ಡಿಪಡಿಸಿ ಆರೋಪಿ ಸ್ಕೂಟರ್ ಸವಾರನನ್ನು ಪುತ್ತೂರು ತಾಲೂಕು ಬೆಟ್ಟಂಪಾಡಿ ನಿವಾಸಿ ಮುಹಮ್ಮದ್ ಮನ್ಸೂರ್ (38) ಎಂದು ಗುರುತಿಸಲಾಗಿದೆ. ಗುರುವಾರ ಬಿಸಿಲೆ ಘಾಟ್ ನಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದ ಸಮಯ ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೆಎ22 ಸಿ1382 ನೋಂದಣಿ ಸಂಖ್ಯೆಯ ಅಂಬ್ಯುಲೆನ್ಸಿನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಮದ್ಯಾಹ್ನ 1.30 ಗಂಟೆಗೆ ಬಿ ಸಿ ರೋಡು ಎನ್ ಜಿ ಸರ್ಕಲ್ ನಿಂದ ಅಂಬ್ಯುಲೆನ್ಸ್ ಮುಂದಿನಿಂದ ಕೆಎ 19 ಇಕೆ0696 ನೋಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ಅಂಬ್ಯುಲೆನ್ಸಿಗೆ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ಹುಚ್ಚಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಆರೋಪಿ ಸ್ಕೂಟರ್ ಸವಾರನ ವಿರುದ್ದ ಬಂಟ್ವಾಳ ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 128/2025 ಕಲಂ 110, 125 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿದೆ. ಆರೋಪಿ ಸ್ಕೂಟರ್ ಸವಾರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.


















0 comments:
Post a Comment