ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಇಲೆಕ್ಟ್ರಿಕಲ್ ಕಾರ್ಮಿಕ ದಾರುಣ ಮೃತ್ಯು - Karavali Times ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಇಲೆಕ್ಟ್ರಿಕಲ್ ಕಾರ್ಮಿಕ ದಾರುಣ ಮೃತ್ಯು - Karavali Times

728x90

14 October 2025

ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಇಲೆಕ್ಟ್ರಿಕಲ್ ಕಾರ್ಮಿಕ ದಾರುಣ ಮೃತ್ಯು

ಬಂಟ್ವಾಳ, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ಹೆದ್ದಾರಿ ಬದಿಯಲ್ಲಿ ಕಾರಿಗೆ ಹಾರ್ನ್ ಅಳವಡಿಸುತ್ತಿದ್ದ ವೇಳೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಅಟೋ ಇಲೆಕ್ಟ್ರಿಕಲ್ ಕಾರ್ಮಿಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಬಂಟ್ವಾಳ ಗಾಣದಪಡ್ಪು ಎಂಬಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. 

ಮೃತ ಅಟೋ ಇಲೆಕ್ಟ್ರಿಕಲ್ ಕಾರ್ಮಿಕನನ್ನು ಕೊಳ್ನಾಡು ಗ್ರಾಮದ ಮರಕಡಬೈಲು ನಿವಾಸಿ ಬಾರೆಬೆಟ್ಟು ಅಬ್ಬಾಸ್ ಎಂಬವರ ಪುತ್ರ ಅಬ್ದುಲ್ ಜಬ್ಬಾರ್ (27) ಎಂದು ಹೆಸರಿಸಲಾಗಿದೆ. ಗಾಣದಪಡ್ಪುವಿನ ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಅಟೋ ಇಲೆಕ್ಟ್ರಿಕಲ್ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಜಬ್ಬಾರ್ ಮಂಗಳವಾರ ಎಂದಿನಂತೆ ಕಾರೊಂದಕ್ಕೆ ಹೆದ್ದಾರಿ ಬದಿಯಲ್ಲಿ ಹಾರ್ನ್ ಅಳವಡಿಸುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಜಬ್ಬಾರ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಿದರು ಅದಾಗಲೇ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಇಲೆಕ್ಟ್ರಿಕಲ್ ಕಾರ್ಮಿಕ ದಾರುಣ ಮೃತ್ಯು Rating: 5 Reviewed By: karavali Times
Scroll to Top