ಮಂಗಳೂರು, ಅಕ್ಟೋಬರ್ 16, 2025 (ಕರಾವಳಿ ಟೈಮ್ಸ್) : ಪಿಲಿಕುಳ ನಿಸರ್ಗಧಾಮದ ಅಭಿವೃದ್ದಿ ಪ್ರಾಧಿಕಾರಕ್ಕೆ ಮಂಗಳೂರು ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು ಲೋಕಾಯುಕ್ತ ಕಚೇರಿಯ ಪೆÇಲೀಸ್ ಡಿವೈಎಸ್ಪಿಗಳಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ., ಪೆÇಲೀಸ್ ಇನ್ಸ್ ಪೆಕ್ಟರ್ ಗಳಾದ ಶ್ರೀಮತಿ ಭಾರತಿ ಜಿ., ರವಿ ಪೀರು ಪವಾರ್ ಹಾಗೂ ಉಡುಪಿ ಲೋಕಾಯುಕ್ತ ಕಚೇರಿಯ ಪೆÇಲೀಸ್ ಇನ್ಸ್ ಪೆಕ್ಟರ್ ರಾಜೇಂದ್ರ ನಾಯ್ಕ್ ಎಂ.ಎನ್. ಅವರು, ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳೊಂದಿಗೆ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ಈ ಅನಿರೀಕ್ಷಿತ ಭೇಟಿ ನೀಡಿದ್ದಾರೆ.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪದೋಷಗಳು ಕಂಡುಬಂದಿದ್ದು, ಸರ್ಚ್ ಕಾರ್ಯಾಚರಣೆ ಮುಂದುವರಿದಿದೆ.
ಪಿಲಿಕುಳದ ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್, ಸೈನ್ಸ್ ಮ್ಯೂಸಿಯಂ ಮುಂತಾದ ಘಟಕಗಳಲ್ಲಿ ಯಾವುದೇ ಅಕ್ರಮ ಅಥವಾ ಅವ್ಯವಹಾರ ಕಂಡುಬಂದರೆ, ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2950997 ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಮಂಗಳೂರು ಲೋಕಾಯುಕ್ತ ಎಸ್ಪಿ ಕುಮಾರಚಂದ್ರ ಅವರು ತಿಳಿಸಿದ್ದಾರೆ.

















0 comments:
Post a Comment