ಪುತ್ತೂರು : ಕಳವು ಅರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ವಶಪಡಿಸಿಕೊಂಡ ಪೊಲೀಸರು - Karavali Times ಪುತ್ತೂರು : ಕಳವು ಅರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ವಶಪಡಿಸಿಕೊಂಡ ಪೊಲೀಸರು - Karavali Times

728x90

14 October 2025

ಪುತ್ತೂರು : ಕಳವು ಅರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ವಶಪಡಿಸಿಕೊಂಡ ಪೊಲೀಸರು

ಪುತ್ತೂರು, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಆರೋಪಿಯನ್ನು  ಒಂದೇ ದಿನದಲ್ಲಿ ಬಂಧಿಸುವಲ್ಲಿ ಪುತ್ತೂರು ಪೊಲೀಸರು ಸಫಲರಾಗಿದ್ದಾರೆ. 

ಬಂಧಿತ ಆರೋಪಿಯನ್ನು ಕಬಕ ಗ್ರಾಮದ ಸಿಟಿಗುಡ್ಡೆ ನಿವಾಸಿ ಪ್ರವೀಣ್ (27) ಎಂದು ಹೆಸರಿಸಲಾಗಿದೆ. ಪುತ್ತೂರು ನಿವಾಸಿ ಶ್ರೀಮತಿ ರೇವತಿ ಅವರ ಮನೆಯಲ್ಲಿ ಅ 12 ರಂದು ಚಿನ್ನದ ಬಳೆ, ಕಿವಿಯೋಲೆ, ಚಿನ್ನದ ಸರ ಹಾಗೂ ನಗದು ಹಣವನ್ನು ಕಳವುಗೈದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. 

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಪತ್ತೆಮಾಡಿ ವಶಕ್ಕೆ ಪಡೆದು ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಆರೊಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಕಳವು ಅರೋಪಿಯನ್ನು ಬಂಧಿಸಿ ಚಿನ್ನಾಭರಣ, ನಗದು ವಶಪಡಿಸಿಕೊಂಡ ಪೊಲೀಸರು Rating: 5 Reviewed By: karavali Times
Scroll to Top