ಬಂಟ್ವಾಳ, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಪುದು ಗ್ರಾಮದ ಮಾರಿಪಳ್ಳ ಪಾಡಿ ಎಂಬಲ್ಲಿ ಅಕ್ರಮ ಕಸಾಯಿ ಖಾನೆ ಮಾಡಿಕೊಂಡು ಅಕ್ರಮವಾಗಿ ಗೋಹತ್ಯೆ ನಡೆಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯ ಮನೆಯನ್ನು ಕಾನೂನು ಬದ್ದವಾಗಿ ಜಪ್ತಿ ಮಾಡಲಾಗಿರುವ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ವ್ಯಕ್ತಪಡಿಸಿ ಸುಳ್ಳು ಸುದ್ದಿ ಹರಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ವಾಯ್ಸ್ ಎಂಬ ವಾಟ್ಸಾಪ್ ಗ್ರೂಪಿನಲ್ಲಿ ರಾಯಲ್ ಜಾಕೀರ್ ಎಂಬ ಹೆಸರಿನ ಮೊಬೈಲ್ ಸಂಖ್ಯೆಯಿಂದ, ಕಾನೂನು ಬದ್ದವಾಗಿ ನಡೆಸಲಾಗಿರುವ ಜಪ್ತಿ ಕಾರ್ಯದ ಬಗ್ಗೆ ಅಕ್ಷೇಪ ವ್ಯಕ್ತಪಡಿಸುತ್ತಾ, ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕರಿಗೆ ಭಯ ಬೀತಿಯನ್ನುಂಟು ಮಾಡಿ ಹಾಗೂ ಸಾರ್ವಜನಿಕ ನೆಮ್ಮದಿಯ ವಿರುದ್ದ ಅಪರಾಧವೆಸಗುವಂತೆ ಮಾಡಿರುವುದು ಕಂಡು ಬಂದಿದೆ ಎಂದು ಆರೋಪಿಸಿ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 149/2025 ಕಲಂ 353(2), 240 ಬಿ ಎನ್ ಎಸ್ ಪ್ರಕಾರ ಪ್ರಕರಣ ದಾಖಲಾಗಿರುತ್ತದೆ.













0 comments:
Post a Comment