ಮಂಗಳೂರು, ಅಕ್ಟೋಬರ್ 18, 2025 (ಕರಾವಳಿ ಟೈಮ್ಸ್) : ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದ ಕ್ರೀಡಾ ಇಲಾಖೆಯು ಕ್ರೀಡಾ ಸಾಧನೆಗೆ ಸಂಬಂಧಪಟ್ಟಂತೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ ವಿವಿಧ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜುನ ಪ್ರಶಸ್ತಿ, ರಾಷ್ಟ್ರೀಯ ಕ್ರೀಡಾ ಪೋಷಕ ಪ್ರಶಸ್ತಿ, ದ್ರೋಣಾಚಾರ್ಯ ಪ್ರಶಸ್ತಿ, ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗಳಿಗೆ ವೆಬ್ಸೈಟ್ www.dbtyas.sports.gov ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 28 ಕೊನೆಯ ದಿನಾಂಕವಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಇಮೇಲ್ Sportsawards-moyas@gov.in ಅಥವಾ ಫೋನ್ ನಂಬ್ರ 011-23387432 (ಬೆಳಿಗ್ಗೆ 9 ಗಂಟೆಯಿಂದ ಸಂಜೆ 5.30ರವರೆಗೆ) ಸಂಪರ್ಕಿಸಬಹುದು. ಅಥವಾ ಟೋಲ್ ಫ್ರೀ ಸಂಖ್ಯೆ 1800-202-5155 (ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ) ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















0 comments:
Post a Comment