ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ : ಶಾಸಕ ಅಶೋಕ್ ರೈಗೆ ಮನವಿ ಸಲ್ಲಿಸಿದ ವ್ಯಾಪಾರಿಗಳು - Karavali Times ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ : ಶಾಸಕ ಅಶೋಕ್ ರೈಗೆ ಮನವಿ ಸಲ್ಲಿಸಿದ ವ್ಯಾಪಾರಿಗಳು - Karavali Times

728x90

13 October 2025

ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ : ಶಾಸಕ ಅಶೋಕ್ ರೈಗೆ ಮನವಿ ಸಲ್ಲಿಸಿದ ವ್ಯಾಪಾರಿಗಳು

ಪುತ್ತೂರು, ಅಕ್ಟೋಬರ್ 14, 2025 (ಕರಾವಳಿ ಟೈಮ್ಸ್) : ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಕಳೆದ 10 ವರ್ಷಗಳಿಂದ ಬೀದಿ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಕಳೆದ ಒಂದು ವರ್ಷದ ಹಿಂದೆ ವ್ಯಾಪಾರ ಮಾಡದಂತೆ ತಡೆಯಲಾಗಿದ್ದು ಮರಳಿ ಅವಕಾಶ ಮಾಡಿಕೊಡುವಂತೆ ವ್ಯಾಪಾರಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಮಾಡಿದ್ದಾರೆ.

ಕಳೆದ 10 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ನಮ್ಮನ್ನು ಏಕಾಏಕಿ ಎಬ್ಬಿಸಿದ್ದಾರೆ. ಇದರಿಂದ ನಮ್ಮ ಜೀವನಕ್ಕೆ ತೊಂದರೆಯಾಗಿದೆ. ವಿವಿಧ ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವ್ಯಾಪಾರಿಗಳು ಶಾಸಕರಲ್ಲಿ ಅವಲತ್ತುಕೊಂಡರು.

ಈ ಬಗ್ಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತನಾಡಿದ ಶಾಸಕರು ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ. ಬೆಂಗಳೂರಿನಂತ ಮಹಾನಗರದಲ್ಲೂ ಬೀದಿ ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿದೆ. ಜನರಿಗೆ ತೊಂದರೆಯಾಗದ ಸ್ಥಳದಲ್ಲಿ ಮತ್ತೆ ವ್ಯಾಪಾರಕ್ಕೆ ಅವಕಾಶ ಕೊಡಬೇಕು ಎಂದು ಶಾಸಕರು ಸೂಚಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಸುಬ್ರಹ್ಮಣ್ಯ ದೇವಸ್ಥಾನ ವಠಾರದಲ್ಲಿ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ : ಶಾಸಕ ಅಶೋಕ್ ರೈಗೆ ಮನವಿ ಸಲ್ಲಿಸಿದ ವ್ಯಾಪಾರಿಗಳು Rating: 5 Reviewed By: karavali Times
Scroll to Top